<p><strong>ನವದೆಹಲಿ: </strong>21 ದಿನಗಳ ಲಾಕ್ಡೌನ್ ಅನ್ನು ಇದೇ 14ರ ನಂತರವೂ ಮುಂದುವರಿಸುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ದಿಗ್ಬಂಧನ ವಿಸ್ತರಿಸುವಂತೆ ವಿವಿಧ ವಲಯಗಳಿಂದ ಸಲಹೆ ಬಂದಿರುವುದಾಗಿಯೂ ಅವರು ಹೇಳಿದ್ದಾರೆ.</p>.<p>ರಾಜ್ಯಸಭೆ ಮತ್ತು ಲೋಕಸಭೆಯ ವಿವಿಧ ಪಕ್ಷಗಳ ಸದನ ನಾಯಕರ ಜತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಜತೆಗೆ ಶನಿವಾರ (ಇದೇ 11) ಸಮಾಲೋಚನೆ ನಡೆಸಿದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಈ ನಾಯಕರಿಗೆ ತಿಳಿಸಿದ್ದಾರೆ.</p>.<p>ಸಭೆಯಲ್ಲಿ ಭಾಗವಹಿಸಿದ್ದ 16 ಪಕ್ಷಗಳ ನಾಯಕರಲ್ಲಿ ಹೆಚ್ಚಿನವರು ಲಾಕ್ಡೌನ್ ವಿಸ್ತರಣೆಗೆ ಒಲವು ತೋರಿದ್ದಾರೆ. ಈಗಿನ ಸನ್ನಿವೇಶದಲ್ಲಿ ಜನರ ಜೀವ ಉಳಿಸುವುದಕ್ಕೆ ಆದ್ಯತೆ ಕೊಡಬೇಕು ಎಂದು ಪ್ರತಿಪಾದಿಸಿದ್ದಾರೆ.</p>.<p>‘ಇದೇ 14ರಂದು ಎಲ್ಲ ನಿರ್ಬಂಧಗಳನ್ನು ಒಮ್ಮೆಗೇ ತೆರವು ಮಾಡುವುದಿಲ್ಲ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ’ ಎಂದು ಸಭೆಯಲ್ಲಿ ಭಾಗವಹಿಸಿದ್ದ ಬಿಜೆಡಿ ನಾಯಕ ಪಿನಾಕಿ ಮಿಶ್ರಾ ಹೇಳಿದ್ದಾರೆ.</p>.<p>‘ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಶೇ 80ರಷ್ಟು ನಾಯಕರು ದಿಗ್ಬಂಧನ ವಿಸ್ತರಣೆಯ ಪರವಾಗಿ ಮಾತನಾಡಿದ್ದಾರೆ. ಅಂತಿಮ ನಿರ್ಧಾರ ಪ್ರಧಾನಿಗೆ ಬಿಟ್ಟಿದ್ದಾರೆ’ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.</p>.<p>ದೇಶದ ಈಗಿನ ಸ್ಥಿತಿಯು ‘ಸಾಮಾಜಿಕ ತುರ್ತುಪರಿಸ್ಥಿತಿ’ಗೆ ಸಮಾನವಾದುದಾಗಿದೆ. ಕಠಿಣವಾದ ನಿರ್ಧಾರಗಳನ್ನು ಕೈಗೊಳ್ಳಲೇಬೇಕಾಗಿದೆ. ಪ್ರತಿಯೊಬ್ಬರೂ ಅತೀವ ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಹಲವು ರಾಜ್ಯ ಸರ್ಕಾರಗಳು, ಜಿಲ್ಲಾಡಳಿತಗಳು ಮತ್ತು ಪರಿಣತರು ಲಾಕ್ಡೌನ್ ಅವಧಿಯನ್ನು ವಿಸ್ತರಿಸುವಂತೆ ಕೋರಿದ್ದಾರೆ</p>.<p><strong>- ನರೇಂದ್ರ ಮೋದಿ, ಪ್ರಧಾನಿ</strong></p>.<p><strong>ಏ.14ರ ಬಳಿಕ ಮದ್ಯ ಮಾರಾಟ?</strong></p>.<p><strong>ಬೆಂಗಳೂರು: </strong>ರಾಜ್ಯದಲ್ಲಿ ಏಪ್ರಿಲ್ 14ರ ಬಳಿಕ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಉದ್ದೇಶ ಇದೆ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.</p>.<p>‘ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಎಲ್ಲಾ ರೀತಿಯ ಕಂದಾಯ ವಸೂಲಿ ನಿಂತುಹೋಗಿದೆ. ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮದ್ಯಮಾರಾಟಕ್ಕೆ ಅನುಮತಿ ನೀಡಲು ಚಿಂತನೆ ನಡೆಸಲಾಗುತ್ತಿದೆ. ಮದ್ಯಸೇವನೆ ಅಭ್ಯಾಸ ಮಾಡಿಕೊಂಡಿರುವವರನ್ನು ನಿಯಂತ್ರಿಸುವುದು ಸಹ ಕಷ್ಟ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>21 ದಿನಗಳ ಲಾಕ್ಡೌನ್ ಅನ್ನು ಇದೇ 14ರ ನಂತರವೂ ಮುಂದುವರಿಸುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ದಿಗ್ಬಂಧನ ವಿಸ್ತರಿಸುವಂತೆ ವಿವಿಧ ವಲಯಗಳಿಂದ ಸಲಹೆ ಬಂದಿರುವುದಾಗಿಯೂ ಅವರು ಹೇಳಿದ್ದಾರೆ.</p>.<p>ರಾಜ್ಯಸಭೆ ಮತ್ತು ಲೋಕಸಭೆಯ ವಿವಿಧ ಪಕ್ಷಗಳ ಸದನ ನಾಯಕರ ಜತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಜತೆಗೆ ಶನಿವಾರ (ಇದೇ 11) ಸಮಾಲೋಚನೆ ನಡೆಸಿದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಈ ನಾಯಕರಿಗೆ ತಿಳಿಸಿದ್ದಾರೆ.</p>.<p>ಸಭೆಯಲ್ಲಿ ಭಾಗವಹಿಸಿದ್ದ 16 ಪಕ್ಷಗಳ ನಾಯಕರಲ್ಲಿ ಹೆಚ್ಚಿನವರು ಲಾಕ್ಡೌನ್ ವಿಸ್ತರಣೆಗೆ ಒಲವು ತೋರಿದ್ದಾರೆ. ಈಗಿನ ಸನ್ನಿವೇಶದಲ್ಲಿ ಜನರ ಜೀವ ಉಳಿಸುವುದಕ್ಕೆ ಆದ್ಯತೆ ಕೊಡಬೇಕು ಎಂದು ಪ್ರತಿಪಾದಿಸಿದ್ದಾರೆ.</p>.<p>‘ಇದೇ 14ರಂದು ಎಲ್ಲ ನಿರ್ಬಂಧಗಳನ್ನು ಒಮ್ಮೆಗೇ ತೆರವು ಮಾಡುವುದಿಲ್ಲ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ’ ಎಂದು ಸಭೆಯಲ್ಲಿ ಭಾಗವಹಿಸಿದ್ದ ಬಿಜೆಡಿ ನಾಯಕ ಪಿನಾಕಿ ಮಿಶ್ರಾ ಹೇಳಿದ್ದಾರೆ.</p>.<p>‘ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಶೇ 80ರಷ್ಟು ನಾಯಕರು ದಿಗ್ಬಂಧನ ವಿಸ್ತರಣೆಯ ಪರವಾಗಿ ಮಾತನಾಡಿದ್ದಾರೆ. ಅಂತಿಮ ನಿರ್ಧಾರ ಪ್ರಧಾನಿಗೆ ಬಿಟ್ಟಿದ್ದಾರೆ’ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.</p>.<p>ದೇಶದ ಈಗಿನ ಸ್ಥಿತಿಯು ‘ಸಾಮಾಜಿಕ ತುರ್ತುಪರಿಸ್ಥಿತಿ’ಗೆ ಸಮಾನವಾದುದಾಗಿದೆ. ಕಠಿಣವಾದ ನಿರ್ಧಾರಗಳನ್ನು ಕೈಗೊಳ್ಳಲೇಬೇಕಾಗಿದೆ. ಪ್ರತಿಯೊಬ್ಬರೂ ಅತೀವ ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಹಲವು ರಾಜ್ಯ ಸರ್ಕಾರಗಳು, ಜಿಲ್ಲಾಡಳಿತಗಳು ಮತ್ತು ಪರಿಣತರು ಲಾಕ್ಡೌನ್ ಅವಧಿಯನ್ನು ವಿಸ್ತರಿಸುವಂತೆ ಕೋರಿದ್ದಾರೆ</p>.<p><strong>- ನರೇಂದ್ರ ಮೋದಿ, ಪ್ರಧಾನಿ</strong></p>.<p><strong>ಏ.14ರ ಬಳಿಕ ಮದ್ಯ ಮಾರಾಟ?</strong></p>.<p><strong>ಬೆಂಗಳೂರು: </strong>ರಾಜ್ಯದಲ್ಲಿ ಏಪ್ರಿಲ್ 14ರ ಬಳಿಕ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಉದ್ದೇಶ ಇದೆ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.</p>.<p>‘ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಎಲ್ಲಾ ರೀತಿಯ ಕಂದಾಯ ವಸೂಲಿ ನಿಂತುಹೋಗಿದೆ. ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮದ್ಯಮಾರಾಟಕ್ಕೆ ಅನುಮತಿ ನೀಡಲು ಚಿಂತನೆ ನಡೆಸಲಾಗುತ್ತಿದೆ. ಮದ್ಯಸೇವನೆ ಅಭ್ಯಾಸ ಮಾಡಿಕೊಂಡಿರುವವರನ್ನು ನಿಯಂತ್ರಿಸುವುದು ಸಹ ಕಷ್ಟ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>