<p><strong>ಶ್ರೀನಗರ: </strong>ದೇಶದಾದ್ಯಂತ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಗ್ರಾಮಗಳಿಗೆ ಹೊರಟಿದ್ದ ಕಾರ್ಮಿಕರು ಮನೆಯನ್ನು ತಲುಪಲಾಗದೆ ಮಾರ್ಗ ಮಧ್ಯೆಯೇ ಪ್ರಾಣಬಿಟ್ಟ ಧಾರುಣ ಘಟನೆ ಬುಧವಾರ ನಡೆದಿದೆ.</p>.<p>ಬನಿಹಾಲ್ ಜಿಲ್ಲೆಯ ಪಿರ್ ಪಾಂಚಲ್ ವಲಯದ ಹಿಜ್ಹಾಲ್ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಮ ತುಂಬಿದ ಪರ್ವತ ಶ್ರೇಣಿಯನ್ನು ದಾಟುತ್ತಿದ್ದಾಗ ನೀರ್ಗಲ್ಲಿನ ಮೇಲಿಂದ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ.</p>.<p>‘ಬನಿಹಾಲ್ಗೆ ಹೊರಟಿದ್ದ ಕಾರ್ಮಿಕರ ಗುಂಪಿನಲ್ಲಿ ಮೂವರು ಸುರಕ್ಷಿತವಾಗಿ ಮನೆ ತಲುಪಿದ್ದು, ಇತರ ಮೂವರು ಕಾಣದಿದ್ದಾಗ ಹುಡುಕಾಟ ನಡೆಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ರಂಬಾನ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಸೀಬ್–ಉರ್–ರೆಹಮಾನ್ ತಿಳಿಸಿದ್ದಾರೆ.</p>.<p>ದೇಶದಾದ್ಯಂತ ಲಾಕ್ ಡೌನ್ ಆಗಿರುವ ಪರಿಣಾಮ ಜಮ್ಮು ಕಾಶ್ಮೀರದಲ್ಲಿ ಸಿಲುಕಿರುವ ನೂರಾರು ವಲಸೆ ಕಾರ್ಮಿಕರು ಪ್ರತಿಕೂಲ ಹವಾಮಾನವನ್ನು ಲೆಕ್ಕಿಸದೇ ಕಾಲ್ನಡಿಗೆಯಲ್ಲಿ ಸ್ವಗ್ರಾಮಗಳಿಗೆ ಹೊರಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ದೇಶದಾದ್ಯಂತ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಗ್ರಾಮಗಳಿಗೆ ಹೊರಟಿದ್ದ ಕಾರ್ಮಿಕರು ಮನೆಯನ್ನು ತಲುಪಲಾಗದೆ ಮಾರ್ಗ ಮಧ್ಯೆಯೇ ಪ್ರಾಣಬಿಟ್ಟ ಧಾರುಣ ಘಟನೆ ಬುಧವಾರ ನಡೆದಿದೆ.</p>.<p>ಬನಿಹಾಲ್ ಜಿಲ್ಲೆಯ ಪಿರ್ ಪಾಂಚಲ್ ವಲಯದ ಹಿಜ್ಹಾಲ್ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಮ ತುಂಬಿದ ಪರ್ವತ ಶ್ರೇಣಿಯನ್ನು ದಾಟುತ್ತಿದ್ದಾಗ ನೀರ್ಗಲ್ಲಿನ ಮೇಲಿಂದ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ.</p>.<p>‘ಬನಿಹಾಲ್ಗೆ ಹೊರಟಿದ್ದ ಕಾರ್ಮಿಕರ ಗುಂಪಿನಲ್ಲಿ ಮೂವರು ಸುರಕ್ಷಿತವಾಗಿ ಮನೆ ತಲುಪಿದ್ದು, ಇತರ ಮೂವರು ಕಾಣದಿದ್ದಾಗ ಹುಡುಕಾಟ ನಡೆಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ರಂಬಾನ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಸೀಬ್–ಉರ್–ರೆಹಮಾನ್ ತಿಳಿಸಿದ್ದಾರೆ.</p>.<p>ದೇಶದಾದ್ಯಂತ ಲಾಕ್ ಡೌನ್ ಆಗಿರುವ ಪರಿಣಾಮ ಜಮ್ಮು ಕಾಶ್ಮೀರದಲ್ಲಿ ಸಿಲುಕಿರುವ ನೂರಾರು ವಲಸೆ ಕಾರ್ಮಿಕರು ಪ್ರತಿಕೂಲ ಹವಾಮಾನವನ್ನು ಲೆಕ್ಕಿಸದೇ ಕಾಲ್ನಡಿಗೆಯಲ್ಲಿ ಸ್ವಗ್ರಾಮಗಳಿಗೆ ಹೊರಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>