<p><strong>ಮುಂಬೈ</strong>: ಮಹಾರಾಷ್ಟ್ರದ ನಾಲ್ಕೈದು ಗ್ರಾಮಗಳು ಮಿಡತೆಗಳ ಹಾವಳಿಯಿಂದ ತತ್ತರಿಸಿವೆ. ಈ ಮಿಡತೆಗಳುಬೆಳೆಗಳನ್ನು ಹಾಳು ಮಾಡುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.</p>.<p>ಬೆಳೆಗಳಿಗೆ ರಾಸಾಯನಿಕ ವಸ್ತು ಸಿಂಪಡಿಸುವುದರಿಂದ ಅವುಗಳನ್ನು ನಿಯಂತ್ರಿಸಬಹುದು ಎಂದು ಮಹಾರಾಷ್ಟ್ರದ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಅಮರಾವತಿ ಜಿಲ್ಲೆಯಿಂದ ಮಿಡತೆಗಳ ಹಿಂಡು ಹಾರಿ ಬಂದಿತ್ತು. ಅಲ್ಲಿಂದ ಅದು ವಾರ್ಧಾಕ್ಕೆ ತಲುಪಿ ಇದೀಗ ನಾಗ್ಪುರದ ಕಟೋಲ್ನಲ್ಲಿ ಬಂದು ಸೇರಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಬೋಸ್ಲೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.</p>.<p>ಮಿಡತೆಗಳು ರಾತ್ರಿ ಹೊತ್ತು ಸಂಚರಿಸುವುದಿಲ್ಲ.ವಲಸೆ ಹೋಗುವ ಕೀಟಗಳು ಹಗಲು ಹೊತ್ತಿನಲ್ಲಿ ಮಾತ್ರ ಸಂಚರಿಸುತ್ತಿದ್ದು ಗಾಳಿಯ ದಿಶೆಯನುಸರಿಸಿ ಹಾರುತ್ತವೆ. ಇವುಎಲ್ಲ ರೀತಿಯ ಬೆಳೆಗಳಿಗೆ ಹಾನಿಯುಂಟು ಮಾಡುತ್ತವೆ. ಇವುಗಳು ಹಸಿರೆಲೆಗಳನ್ನು ತಿನ್ನುತ್ತಿದ್ದು, ಎಕರೆಗಟ್ಟಲೆ ಜಮೀನಿನಲ್ಲಿರುವ ಬೆಳೆಗಳನ್ನು ನಾಶ ಮಾಡುತ್ತವೆ ಎಂದು ಬೋಸ್ಲೆ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಮಥುರಾದಲ್ಲಿ ಮಿಡತೆ ದಾಳಿಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.<br />ಪಾಕಿಸ್ತಾನದಿಂದ ಈ ಮಿಡತೆಗಳು ರಾಜಸ್ತಾನ ಮೂಲಕ ಏಪ್ರಿಲ್ 11 ರಂದು ಭಾರತಕ್ಕೆ ಬಂದಿದ್ದವು. ಸೋಮವಾರ ಇವು ಜೈಪುರ ನಗರಕ್ಕೆ ಪ್ರವೇಶಿಸಿದ್ದವು.</p>.<p>200 ಲೀಟರ್ ಕ್ಲೋರೊಪೈರಿಫೋಸ್ನ್ನು ತೆಗೆದಿರಿಸಿದ್ದು, ಜಿಲ್ಲೆಯಿಂದ ಹೊರಗಿನವರಿಗೆ ಈ ರಾಸಾಯನಿಕ ದ್ರಾವಣವನ್ನು ಮಾರಾಟ ಮಾಡುವುದು ಬೇಡ. 12 ಟ್ರ್ಯಾಕ್ಟರ್ಗಳಲ್ಲಿ ಸ್ಪೇಯರ್ಗಳನ್ನು ಸಿದ್ಧ ಮಾಡಿಟ್ಟುಕೊಂಡಿದ್ದು, ಅಗ್ನಿ ಶಾಮಕ ದಳ ಎಚ್ಚರಿಕೆಯಿಂದಿರುವಂತೆ ಹೇಳಲಾಗಿದೆ ಎಂದಿದ್ದಾರೆ ಮಥುರಾ ಜಿಲ್ಲಾ ಮೆಜಿಸ್ಟ್ರೇಟ್.</p>.<p>ಮಿಡತೆಗಳ ಹಿಂಡು ರಾಜಸ್ಥಾನ, ಪಂಜಾಬ್, ಹರ್ಯಾಣ ಮತ್ತು ಮಧ್ಯ ಪ್ರದೇಶಕ್ಕೆ ತಲುಪಿದೆ ಎಂದ ಕೇಂದ್ರ ಪರಿಸರ ಸಚಿವಾಲಯ ಕಳೆದ ವಾರವೇ ಹೇಳಿತ್ತು. ದೇಶದ ರಾಜಧಾನಿ ದೆಹಲಿಯಲ್ಲಿಯೂ ಮುಂಜಾಗ್ರತೆ ವಹಿಸಲಾಗಿದೆ.</p>.<p>ರಾಜಸ್ಥಾನ ಮಿಡತೆ ಹಾವಳಿಯಿಂದ ಕಂಗೆಟ್ಟಿದ್ದು, ನಿರೀಕ್ಷಿತ ಸಮಯಕ್ಕಿಂತ ಮುಂಚೆಯೇ ಇವುಗಳು ಭಾರತಕ್ಕೆಬಂದಿವೆ. ಮಿಡತೆಗಳುಈ ವರ್ಷ ಭಾರತದ ಕೃಷಿಗೆ ತೀವ್ರ ಅಪಾಯ ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ನಾಲ್ಕೈದು ಗ್ರಾಮಗಳು ಮಿಡತೆಗಳ ಹಾವಳಿಯಿಂದ ತತ್ತರಿಸಿವೆ. ಈ ಮಿಡತೆಗಳುಬೆಳೆಗಳನ್ನು ಹಾಳು ಮಾಡುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.</p>.<p>ಬೆಳೆಗಳಿಗೆ ರಾಸಾಯನಿಕ ವಸ್ತು ಸಿಂಪಡಿಸುವುದರಿಂದ ಅವುಗಳನ್ನು ನಿಯಂತ್ರಿಸಬಹುದು ಎಂದು ಮಹಾರಾಷ್ಟ್ರದ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಅಮರಾವತಿ ಜಿಲ್ಲೆಯಿಂದ ಮಿಡತೆಗಳ ಹಿಂಡು ಹಾರಿ ಬಂದಿತ್ತು. ಅಲ್ಲಿಂದ ಅದು ವಾರ್ಧಾಕ್ಕೆ ತಲುಪಿ ಇದೀಗ ನಾಗ್ಪುರದ ಕಟೋಲ್ನಲ್ಲಿ ಬಂದು ಸೇರಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಬೋಸ್ಲೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.</p>.<p>ಮಿಡತೆಗಳು ರಾತ್ರಿ ಹೊತ್ತು ಸಂಚರಿಸುವುದಿಲ್ಲ.ವಲಸೆ ಹೋಗುವ ಕೀಟಗಳು ಹಗಲು ಹೊತ್ತಿನಲ್ಲಿ ಮಾತ್ರ ಸಂಚರಿಸುತ್ತಿದ್ದು ಗಾಳಿಯ ದಿಶೆಯನುಸರಿಸಿ ಹಾರುತ್ತವೆ. ಇವುಎಲ್ಲ ರೀತಿಯ ಬೆಳೆಗಳಿಗೆ ಹಾನಿಯುಂಟು ಮಾಡುತ್ತವೆ. ಇವುಗಳು ಹಸಿರೆಲೆಗಳನ್ನು ತಿನ್ನುತ್ತಿದ್ದು, ಎಕರೆಗಟ್ಟಲೆ ಜಮೀನಿನಲ್ಲಿರುವ ಬೆಳೆಗಳನ್ನು ನಾಶ ಮಾಡುತ್ತವೆ ಎಂದು ಬೋಸ್ಲೆ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಮಥುರಾದಲ್ಲಿ ಮಿಡತೆ ದಾಳಿಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.<br />ಪಾಕಿಸ್ತಾನದಿಂದ ಈ ಮಿಡತೆಗಳು ರಾಜಸ್ತಾನ ಮೂಲಕ ಏಪ್ರಿಲ್ 11 ರಂದು ಭಾರತಕ್ಕೆ ಬಂದಿದ್ದವು. ಸೋಮವಾರ ಇವು ಜೈಪುರ ನಗರಕ್ಕೆ ಪ್ರವೇಶಿಸಿದ್ದವು.</p>.<p>200 ಲೀಟರ್ ಕ್ಲೋರೊಪೈರಿಫೋಸ್ನ್ನು ತೆಗೆದಿರಿಸಿದ್ದು, ಜಿಲ್ಲೆಯಿಂದ ಹೊರಗಿನವರಿಗೆ ಈ ರಾಸಾಯನಿಕ ದ್ರಾವಣವನ್ನು ಮಾರಾಟ ಮಾಡುವುದು ಬೇಡ. 12 ಟ್ರ್ಯಾಕ್ಟರ್ಗಳಲ್ಲಿ ಸ್ಪೇಯರ್ಗಳನ್ನು ಸಿದ್ಧ ಮಾಡಿಟ್ಟುಕೊಂಡಿದ್ದು, ಅಗ್ನಿ ಶಾಮಕ ದಳ ಎಚ್ಚರಿಕೆಯಿಂದಿರುವಂತೆ ಹೇಳಲಾಗಿದೆ ಎಂದಿದ್ದಾರೆ ಮಥುರಾ ಜಿಲ್ಲಾ ಮೆಜಿಸ್ಟ್ರೇಟ್.</p>.<p>ಮಿಡತೆಗಳ ಹಿಂಡು ರಾಜಸ್ಥಾನ, ಪಂಜಾಬ್, ಹರ್ಯಾಣ ಮತ್ತು ಮಧ್ಯ ಪ್ರದೇಶಕ್ಕೆ ತಲುಪಿದೆ ಎಂದ ಕೇಂದ್ರ ಪರಿಸರ ಸಚಿವಾಲಯ ಕಳೆದ ವಾರವೇ ಹೇಳಿತ್ತು. ದೇಶದ ರಾಜಧಾನಿ ದೆಹಲಿಯಲ್ಲಿಯೂ ಮುಂಜಾಗ್ರತೆ ವಹಿಸಲಾಗಿದೆ.</p>.<p>ರಾಜಸ್ಥಾನ ಮಿಡತೆ ಹಾವಳಿಯಿಂದ ಕಂಗೆಟ್ಟಿದ್ದು, ನಿರೀಕ್ಷಿತ ಸಮಯಕ್ಕಿಂತ ಮುಂಚೆಯೇ ಇವುಗಳು ಭಾರತಕ್ಕೆಬಂದಿವೆ. ಮಿಡತೆಗಳುಈ ವರ್ಷ ಭಾರತದ ಕೃಷಿಗೆ ತೀವ್ರ ಅಪಾಯ ಉಂಟುಮಾಡುತ್ತದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>