ಹೈದರಾಬಾದ್ (ಪಿಟಿಐ): ಟಿಆರ್ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರು ರೂಪಿಸಲು ಉದ್ದೇಶಿಸಿರುವ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟದಲ್ಲಿ (ಸಂಯುಕ್ತ ರಂಗ) ಕಾಂಗ್ರೆಸ್ ಪಕ್ಷವನ್ನು ಸೇರಿಸಿಕೊಳ್ಳಲು ಯಾವುದೇ ವಿರೋಧ ಇಲ್ಲ. ಆದರೆ, ಈ ಮೈತ್ರಿಕೂಟದ ಚಾಲಕ ಸ್ಥಾನವನ್ನು ಆ ಪಕ್ಷಕ್ಕೆ ಬಿಟ್ಟುಕೊಡಲಾಗದು ಎಂದು ಟಿಆರ್ಎಸ್ ಹೇಳಿದೆ.