ಮುಂದಿನ ಪ್ರಧಾನಿ ಯಾರಾಗಬೇಕು ಎಂದು ಬಯಸುತ್ತೀರಿ ಎಂಬ ಪ್ರಶ್ನೆಗೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಈವರೆಗೆ ಹಾರಿಕೆಯ ಉತ್ತರ ಕೊಡುತ್ತಿದ್ದರು. ಈಗ, ‘ದೇಶದ ಅತ್ಯುನ್ನತ ಹುದ್ದೆಗೆ ಮಾಯಾವತಿ ಅವರು ಏರಿದರೆ ತಮಗೆ ಸಂತೋಷ’ ಎಂದಿದ್ದಾರೆ. ಮಾಯಾವತಿ ಪ್ರಧಾನಿಯಾದರೆ, ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಲು ತಮಗೆ ಅವರು ನೆರವಾಗುತ್ತಾರೆ ಎಂದೂ ಹೇಳಿದ್ದಾರೆ.