ನವದೆಹಲಿ: ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ‘ಮೋದಿ ಪುನರಾಯ್ಕೆಯಾಗಬೇಕು’ ಎಂದು ಹೇಳುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಚುನಾವಣಾ ಆಯೋಗದ ಪತ್ರವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಈ ಪತ್ರದಲ್ಲಿರುವ ವಿಚಾರಗಳನ್ನು ನಿಯಮಗಳ ಅನುಸಾರ ಪರಿಶೀಲನೆ ನಡೆಸುವುದಕ್ಕಾಗಿ ರಾಷ್ಟ್ರಪತಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ರಾಜಕೀಯ ಹೇಳಿಕೆ ನೀಡುವ ಮೂಲಕ ಕಲ್ಯಾಣ್ ಸಿಂಗ್ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಚುನಾವಣಾ ಆಯೋಗವು ರಾಷ್ಟ್ರಪತಿಗೆ ಮಂಗಳವಾರ ಪತ್ರ ಬರೆದಿತ್ತು.