ಲಖನೌ: ಉತ್ತರಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತೋರಿದ ಪ್ರದರ್ಶನ ಪುನರಾವರ್ತಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯು ಈ ಬಾರಿ ಭಿನ್ನಮತವನ್ನೂ ಎದುರಿಸಬೇಕಾಗಿದೆ. ಟಿಕೆಟ್ ಸಿಗದೇ ನಿರಾಶರಾದ ಸುಮಾರು ಒಂದು ಡಜನ್ ಹಾಲಿ ಮತ್ತು ಮಾಜಿ ಸಂಸತ್ ಸದಸ್ಯರಲ್ಲಿ ಕೆಲವರು ಎದುರಾಳಿ ಪಕ್ಷ ಸೇರಿದ್ದಾರೆ. ಮತ್ತೆ ಕೆಲವರು ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡುವ ಬೆದರಿಕೆಯೊಡ್ಡಿದ್ದಾರೆ.