ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಪಾಲ: 480 ಪ್ರಕರಣ ವಿಲೇವಾರಿ

ಭ್ರಷ್ಟಾಚಾರಕ್ಕೆ ಸಂಬಂಧಪಡದ ದೂರು ಅರ್ಜಿ ಸಲ್ಲಿಸದಿರಲು ಕೋರಿಕೆ
Last Updated 2 ಜುಲೈ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷದ ಮೇ ಅಂತ್ಯಕ್ಕೆ 480 ದೂರುಗಳನ್ನು ಲೋಕಪಾಲ ವಿಲೇವಾರಿ ಮಾಡಿದೆ.

ಇವುಗಳಲ್ಲಿ ಕೆಲವು ಭ್ರಷ್ಟಾಚಾರಕ್ಕೆ ಸಂಬಂಧಪಡದ ದೂರುಗಳಿವೆ. ನಾಗರಿಕರು ಭ್ರಷ್ಟಾಚಾರಕ್ಕೆ ಸಂಬಂಧಪಡದ ದೂರುಗಳನ್ನು ಸಲ್ಲಿಸಬಾರದು. ಈ ಬಗ್ಗೆ ಮಾಹಿತಿ ನೀಡುವ ಪ್ರಯತ್ನವನ್ನು ಸಹ ಲೋಕಪಾಲ ಮಾಡಿದೆ. ಲೋಕಪಾಲಕ್ಕೆ ದೂರು ಸಲ್ಲಿಸುವ ಸಂಬಂಧ ಅರ್ಜಿಯ ನಮೂನೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಪಾಲ ವಿಚಾರಣೆ ನಡೆಸುತ್ತದೆ. ಪಿಂಚಣಿ, ಸೇವೆಗೆ ಸಂಬಂಧಿಸಿದ ವಿಷಯಗಳು ಮತ್ತು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಆಯಾ ಇಲಾಖೆಗಳಿಗೆ ದೂರು ನೀಡಬೇಕೇ ಹೊರತು ಲೋಕಪಾಲಕ್ಕೆ ಅಲ್ಲ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದರೆ ಮಾತ್ರ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT