<p><strong>ನವದೆಹಲಿ: </strong>ಒಂದು ತಿಂಗಳ ಕಾಲ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸಿದ ಲೋಕಪಾಲದ ಸದಸ್ಯ ನ್ಯಾಯಮೂರ್ತಿ ಅಜಯ್ಕುಮಾರ್ ತ್ರಿಪಾಠಿ (63) ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.</p>.<p>ಚತ್ತೀಸಗಡ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯಾಗಿದ್ದ ತ್ರಿಪಾಠಿ ಅವರು ಶನಿವಾರ ರಾತ್ರಿ 8.30ರಲ್ಲಿ ದೆಹಲಿಯ ಏಮ್ಸ್ನ ಜೈ ಪ್ರಕಾಶ್ ನಾರಾಯಣ್ ಟ್ರಾಮಾ ಕೇಂದ್ರದಲ್ಲಿ ನಿಧನರಾದರು.</p>.<p>ಏಪ್ರಿಲ್ 2 ರಂದು ತ್ರಿಪಾಠಿ ಅವರು ಏಮ್ಸ್ಗೆ ದಾಖಲಾಗಿದ್ದರು. ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರನ್ನು ಏಮ್ಸ್ ಆವರಣದ ಟ್ರಾಮಾ ಸೆಂಟರ್ಗೆ ಸ್ಥಳಾಂತರಿಸಲಾಗಿತ್ತು. ಹದಿನೈದು ದಿನಗಳಿಂದ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.</p>.<p>ಅವರ ಪುತ್ರಿ ಮತ್ತು ಮನೆಯ ಅಡುಗೆ ಕೆಲಸದಾತನಿಗೂ ಕೋವಿಡ್ ಸೋಂಕು ತಗುಲಿತ್ತು. ಆದರೆ, ಅವರು ಗುಣಮುಖರಾಗಿದ್ದಾರೆ.<br />ಕಳೆದ ವರ್ಷ ಮಾರ್ಚ್ 23 ರಂದು ಲೋಕಪಾಲದ ನಾಲ್ವರುನ್ಯಾಯಾಂಗ ಸದಸ್ಯರ ಪೈಕಿ ಒಬ್ಬರಾಗಿ ತ್ರಿಪಾಠಿ ಅವರನ್ನು ನೇಮಕ ಮಾಡಲಾಗಿತ್ತು.</p>.<p>ತ್ರಿಪಾಠಿ ಅವರ ನಿಧನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್, ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಕಂಬನಿ ಮಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಒಂದು ತಿಂಗಳ ಕಾಲ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸಿದ ಲೋಕಪಾಲದ ಸದಸ್ಯ ನ್ಯಾಯಮೂರ್ತಿ ಅಜಯ್ಕುಮಾರ್ ತ್ರಿಪಾಠಿ (63) ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.</p>.<p>ಚತ್ತೀಸಗಡ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯಾಗಿದ್ದ ತ್ರಿಪಾಠಿ ಅವರು ಶನಿವಾರ ರಾತ್ರಿ 8.30ರಲ್ಲಿ ದೆಹಲಿಯ ಏಮ್ಸ್ನ ಜೈ ಪ್ರಕಾಶ್ ನಾರಾಯಣ್ ಟ್ರಾಮಾ ಕೇಂದ್ರದಲ್ಲಿ ನಿಧನರಾದರು.</p>.<p>ಏಪ್ರಿಲ್ 2 ರಂದು ತ್ರಿಪಾಠಿ ಅವರು ಏಮ್ಸ್ಗೆ ದಾಖಲಾಗಿದ್ದರು. ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರನ್ನು ಏಮ್ಸ್ ಆವರಣದ ಟ್ರಾಮಾ ಸೆಂಟರ್ಗೆ ಸ್ಥಳಾಂತರಿಸಲಾಗಿತ್ತು. ಹದಿನೈದು ದಿನಗಳಿಂದ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.</p>.<p>ಅವರ ಪುತ್ರಿ ಮತ್ತು ಮನೆಯ ಅಡುಗೆ ಕೆಲಸದಾತನಿಗೂ ಕೋವಿಡ್ ಸೋಂಕು ತಗುಲಿತ್ತು. ಆದರೆ, ಅವರು ಗುಣಮುಖರಾಗಿದ್ದಾರೆ.<br />ಕಳೆದ ವರ್ಷ ಮಾರ್ಚ್ 23 ರಂದು ಲೋಕಪಾಲದ ನಾಲ್ವರುನ್ಯಾಯಾಂಗ ಸದಸ್ಯರ ಪೈಕಿ ಒಬ್ಬರಾಗಿ ತ್ರಿಪಾಠಿ ಅವರನ್ನು ನೇಮಕ ಮಾಡಲಾಗಿತ್ತು.</p>.<p>ತ್ರಿಪಾಠಿ ಅವರ ನಿಧನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್, ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಕಂಬನಿ ಮಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>