<p><strong>ಲಖನೌ</strong>: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಗುಂಪು ಹಲ್ಲೆಗಳು ಮರುಕಳಿಸಿದ್ದು, ಒಬ್ಬ ಯುವಕ ಮೃತಪಟ್ಟಿದ್ದಾರೆ.</p>.<p>ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಕಳುಹಿಸಿದ್ದನ್ನು ಒಪ್ಪಿಕೊಂಡಿಲ್ಲ ಎಂದು ಆರೋಪಿಸಿ ಸಲೀಂ ಅಹಮದ್ (20) ಎಂಬವರನ್ನು ಬಿಜ್ನೋರ್ ಜಿಲ್ಲೆಯಲ್ಲಿ ಹೊಡೆದು ಸಾಯಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.</p>.<p>ಇಟಾವಾ ಜಿಲ್ಲೆಯಲ್ಲಿ ಮಕ್ಕಳಕಳ್ಳ ಎಂಬ ಸಂದೇಹದ ಮೇಲೆ ಯುವಕನ್ನು ಬೆತ್ತಲೆಗೊಳಿಸಿ,ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಲಾಗಿದೆ. ಜನರ ಗುಂಪು ಯುವಕನನ್ನು ಥಳಿಸುತ್ತಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.</p>.<p>ಮಕ್ಕಳ ಕಳ್ಳತನ ಆರೋಪದಲ್ಲಿ ಮಥುರಾ ಪಟ್ಟಣದಲ್ಲಿ ಮೂವರು ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ.</p>.<p>ಕಳ್ಳನೆಂದು ಭಾವಿಸಿ 25 ವರ್ಷದ ಸೋನು ಎಂಬಾತನನ್ನುಅಲಿಗಡ ಪಟ್ಟಣದಲ್ಲಿ ಥಳಿಸಲಾಗಿದೆ. ಕೆಲ ದಿನಗಳ ಹಿಂದೆ ರಾತ್ರಿವೇಳೆ ಬಾಲ್ಕನಿಯಿಂದ ಆಯತಪ್ಪಿ ಪಕ್ಕದ ಮನೆಯ ಮಾಳಿಗೆ ಮೇಲೆ ಬಿದ್ದಿದ್ದ ಸೋನುಗೆ ಸ್ಥಳೀಯರು ಥಳಿಸಿದ್ದರು. ಆಸ್ಪತ್ರೆಯಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಫಿರೋಜಾಬಾದ್ನಲ್ಲಿ ಇತ್ತೀಚೆಗೆ ಗುಂಪು ಹಲ್ಲೆ ಘಟನೆ ಬೆಳಕಿಗೆ ಬಂದ ಇಂತಹ ಬಳಿಕ ಇನ್ನಷ್ಟು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಗುಂಪು ಹಲ್ಲೆಗಳು ಮರುಕಳಿಸಿದ್ದು, ಒಬ್ಬ ಯುವಕ ಮೃತಪಟ್ಟಿದ್ದಾರೆ.</p>.<p>ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಕಳುಹಿಸಿದ್ದನ್ನು ಒಪ್ಪಿಕೊಂಡಿಲ್ಲ ಎಂದು ಆರೋಪಿಸಿ ಸಲೀಂ ಅಹಮದ್ (20) ಎಂಬವರನ್ನು ಬಿಜ್ನೋರ್ ಜಿಲ್ಲೆಯಲ್ಲಿ ಹೊಡೆದು ಸಾಯಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.</p>.<p>ಇಟಾವಾ ಜಿಲ್ಲೆಯಲ್ಲಿ ಮಕ್ಕಳಕಳ್ಳ ಎಂಬ ಸಂದೇಹದ ಮೇಲೆ ಯುವಕನ್ನು ಬೆತ್ತಲೆಗೊಳಿಸಿ,ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಲಾಗಿದೆ. ಜನರ ಗುಂಪು ಯುವಕನನ್ನು ಥಳಿಸುತ್ತಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.</p>.<p>ಮಕ್ಕಳ ಕಳ್ಳತನ ಆರೋಪದಲ್ಲಿ ಮಥುರಾ ಪಟ್ಟಣದಲ್ಲಿ ಮೂವರು ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ.</p>.<p>ಕಳ್ಳನೆಂದು ಭಾವಿಸಿ 25 ವರ್ಷದ ಸೋನು ಎಂಬಾತನನ್ನುಅಲಿಗಡ ಪಟ್ಟಣದಲ್ಲಿ ಥಳಿಸಲಾಗಿದೆ. ಕೆಲ ದಿನಗಳ ಹಿಂದೆ ರಾತ್ರಿವೇಳೆ ಬಾಲ್ಕನಿಯಿಂದ ಆಯತಪ್ಪಿ ಪಕ್ಕದ ಮನೆಯ ಮಾಳಿಗೆ ಮೇಲೆ ಬಿದ್ದಿದ್ದ ಸೋನುಗೆ ಸ್ಥಳೀಯರು ಥಳಿಸಿದ್ದರು. ಆಸ್ಪತ್ರೆಯಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಫಿರೋಜಾಬಾದ್ನಲ್ಲಿ ಇತ್ತೀಚೆಗೆ ಗುಂಪು ಹಲ್ಲೆ ಘಟನೆ ಬೆಳಕಿಗೆ ಬಂದ ಇಂತಹ ಬಳಿಕ ಇನ್ನಷ್ಟು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>