<p><strong>ಮೈಸೂರು: </strong>‘ರೈಲು ಬಿಡುವುದು ಬೇಡ. ಇನ್ನಾದರೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸಿ’ ಎಂದು ಯುವಕರ ಗುಂಪೊಂದು ಇಲ್ಲಿ ಮಂಗಳವಾರ ನಡೆದ ಬಿಜೆಪಿಯ ಕೆ.ಆರ್.ಕ್ಷೇತ್ರದ ಕೃತಜ್ಞತಾ ಸಮಾವೇಶದಲ್ಲಿ ಸಂಸದ ಪ್ರತಾಪಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡಿತು.</p>.<p>ಮೊದಲಿಗೆ ಮಾತನಾಡಿದ ಪ್ರತಾಪಸಿಂಹ, ‘ಮೈಸೂರು–ಕುಶಾಲನಗರ ರೈಲು ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ಜಾಗ ಕೊಡಲಿಲ್ಲ. ಮುಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಮೊದಲು ಈ ಯೋಜನೆಯನ್ನು ಕಾರ್ಯಗತ ಮಾಡಲಾಗುವುದು’ ಎಂದು ಹೇಳುತ್ತಿದ್ದಂತೆ ಕೆಲವು ಯುವಕರು ಘೋಷಣೆಗಳನ್ನು ಕೂಗತೊಡಗಿದರು.</p>.<p>‘ಕುಶಾಲನಗರ ಯೋಜನೆ ಎಂದು ರೈಲು ಬಿಡುವುದು ಬೇಡ. ರೈಲ್ವೆ ಇಲಾಖೆಯಲ್ಲಿ ಮಹಾರಾಷ್ಟ್ರದಲ್ಲಿ ಅಪ್ರೆಂಟೀಸ್ ಮಾಡಿದವರಿಗೆ ಉದ್ಯೋಗ ನೀಡಲಾಗುತ್ತಿದೆ. ಈ ರೀತಿ ಕನ್ನಡಿಗರಿಗೂ ಉದ್ಯೋಗ ಕೊಡಿಸಬೇಕು. ಇದರಿಂದ ರಾಜ್ಯದ 2,500 ಜನರಿಗೆ ಉದ್ಯೋಗ ಲಭಿಸುತ್ತದೆ’ ಎಂದು ಕೂಗುತ್ತಾ ಯುವಕರು ವೇದಿಕೆಯ ಮುಂಭಾಗಕ್ಕೆ ಧಾವಿಸಿದರು.</p>.<p>‘ಈ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದಾಗಲೂ ಇದೇ ವಿಷಯ ಪ್ರಸ್ತಾಪಿಸಲಾಗಿತ್ತು. ಏನೂ ಪ್ರಯೋಜನವಾಗಿಲ್ಲ’<br /> ಎಂದು ಯುವಕರು ಕಿಡಿಕಾರಿದರು. ಈ ವೇಳೆ ವೇದಿಕೆ ಹತ್ತಲು ಯತ್ನಿಸಿದ ಯುವಕರನ್ನು ಕಾರ್ಯಕರ್ತರು ತಡೆದರು.</p>.<p>ನಂತರ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶೀಘ್ರವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ಯುವಕರ ಗುಂಪು ಶಾಂತವಾಯಿತು.</p>.<p><strong>ಎಚ್ಡಿಕೆ ವಿರುದ್ಧ ಬಿಎಸ್ವೈ ಚಾಟಿ</strong></p>.<p>ಕಾಂಗ್ರೆಸ್ನ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ರಾಜ್ಯದ ಜನತೆಗೆ ಅಪಮಾನ ಮಾಡಿದ್ದಾರೆ ಎಂದು ಯಡಿಯೂರಪ್ಪ ಚಾಟಿ ಬೀಸಿದರು.</p>.<p>ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು ₹ 50 ಸಾವಿರದವರೆಗಿನ ಸಾಲ ಮನ್ನಾ ಮಾಡಿದ್ದಾರೆ. ಮತ್ತೆ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಲ ಮಾಡುತ್ತೇನೆ ಎಂದು ಬೂಟಾಟಿಕೆ ಹೇಳಿಕೆಗಳನ್ನು ಕುಮಾರಸ್ವಾಮಿ ನೀಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಕಳೆದ ಮೂರು ತಿಂಗಳಿನಿಂದ ಅಭಿವೃದ್ಧಿ ಸ್ಥಗಿತವಾಗಿದೆ. ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಇನ್ನೂ ನಡೆದಿಲ್ಲ. ಇದಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯದ ಜನತೆ ಈ ದೊಂಬರಾಟ ನೋಡುವಂತಾಗಿದೆ ಎಂದು ವ್ಯಂಗ್ಯವಾಡಿದರು.</p>.<p>‘ಇನ್ನು 15 ದಿನಗಳ ಕಾಲ ಸುಮ್ಮನಿರುತ್ತೇನೆ. ಸರ್ಕಾರದ ನಡೆ ನೋಡಿ ಮುಂದಿನ ಹೋರಾಟದ ರೂಪರೇಷೆಗಳನ್ನು ನಿರ್ಧರಿಸಲಾಗುವುದು. ಕಾಂಗ್ರೆಸ್ನ ಆಶ್ರಯದಲ್ಲಿರುವ ಜೆಡಿಎಸ್ ಸರ್ಕಾರ ಕುರಿತು ಜಾಗ್ರತೆಯಿಂದಿರಬೇಕು’ ಎಂದರು.</p>.<p>ಕೆ.ಆರ್.ವಿಧಾನಸಭಾ ಕ್ಷೇತ್ರದಲ್ಲಿ ಅಧಿಕ ಮತಗಳನ್ನು ಬಿಜೆಪಿಗೆ ನೀಡುವಲ್ಲಿ ಯಶಸ್ಸು ಕಂಡ ಬೂತ್ಮಟ್ಟದ ಪಕ್ಷದ ಕಾರ್ಯಕರ್ತರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ನಂಜುಂಡಸ್ವಾಮಿ, ಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಬಿ.ವಿ.ಮಂಜುನಾಥ್, ಮಹದೇವಮ್ಮ, ಮುಖಂಡರಾದ ರಾಜೇಂದ್ರ, ತೋಂಟದಾರ್ಯ, ನಿರಂಜನಮೂರ್ತಿ, ಎಚ್.ಆರ್.ಸುರೇಶ್ಬಾಬು, ರಮೇಶ್ ಹಾಜರಿದ್ದರು.</p>.<p>**<br /> ಮೂರೂವರೆ ಸಾವಿರಕ್ಕೂ ಅಧಿಕ ಮನೆಗಳನ್ನು ವಸತಿರಹಿತರಿಗೆ ನೀಡಲಾಗಿದೆ. ಇನ್ನು 24 ತಿಂಗಳಲ್ಲಿ ಬೆಂಗಳೂರು – ಮೈಸೂರು ಅಷ್ಟಪಥ ಹೆದ್ದಾರಿ ನಿರ್ಮಾಣವಾಗಲಿದೆ<br /> <strong>- ಪ್ರತಾಪಸಿಂಹ, ಸಂಸದ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ರೈಲು ಬಿಡುವುದು ಬೇಡ. ಇನ್ನಾದರೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸಿ’ ಎಂದು ಯುವಕರ ಗುಂಪೊಂದು ಇಲ್ಲಿ ಮಂಗಳವಾರ ನಡೆದ ಬಿಜೆಪಿಯ ಕೆ.ಆರ್.ಕ್ಷೇತ್ರದ ಕೃತಜ್ಞತಾ ಸಮಾವೇಶದಲ್ಲಿ ಸಂಸದ ಪ್ರತಾಪಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡಿತು.</p>.<p>ಮೊದಲಿಗೆ ಮಾತನಾಡಿದ ಪ್ರತಾಪಸಿಂಹ, ‘ಮೈಸೂರು–ಕುಶಾಲನಗರ ರೈಲು ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ಜಾಗ ಕೊಡಲಿಲ್ಲ. ಮುಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಮೊದಲು ಈ ಯೋಜನೆಯನ್ನು ಕಾರ್ಯಗತ ಮಾಡಲಾಗುವುದು’ ಎಂದು ಹೇಳುತ್ತಿದ್ದಂತೆ ಕೆಲವು ಯುವಕರು ಘೋಷಣೆಗಳನ್ನು ಕೂಗತೊಡಗಿದರು.</p>.<p>‘ಕುಶಾಲನಗರ ಯೋಜನೆ ಎಂದು ರೈಲು ಬಿಡುವುದು ಬೇಡ. ರೈಲ್ವೆ ಇಲಾಖೆಯಲ್ಲಿ ಮಹಾರಾಷ್ಟ್ರದಲ್ಲಿ ಅಪ್ರೆಂಟೀಸ್ ಮಾಡಿದವರಿಗೆ ಉದ್ಯೋಗ ನೀಡಲಾಗುತ್ತಿದೆ. ಈ ರೀತಿ ಕನ್ನಡಿಗರಿಗೂ ಉದ್ಯೋಗ ಕೊಡಿಸಬೇಕು. ಇದರಿಂದ ರಾಜ್ಯದ 2,500 ಜನರಿಗೆ ಉದ್ಯೋಗ ಲಭಿಸುತ್ತದೆ’ ಎಂದು ಕೂಗುತ್ತಾ ಯುವಕರು ವೇದಿಕೆಯ ಮುಂಭಾಗಕ್ಕೆ ಧಾವಿಸಿದರು.</p>.<p>‘ಈ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದಾಗಲೂ ಇದೇ ವಿಷಯ ಪ್ರಸ್ತಾಪಿಸಲಾಗಿತ್ತು. ಏನೂ ಪ್ರಯೋಜನವಾಗಿಲ್ಲ’<br /> ಎಂದು ಯುವಕರು ಕಿಡಿಕಾರಿದರು. ಈ ವೇಳೆ ವೇದಿಕೆ ಹತ್ತಲು ಯತ್ನಿಸಿದ ಯುವಕರನ್ನು ಕಾರ್ಯಕರ್ತರು ತಡೆದರು.</p>.<p>ನಂತರ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶೀಘ್ರವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ಯುವಕರ ಗುಂಪು ಶಾಂತವಾಯಿತು.</p>.<p><strong>ಎಚ್ಡಿಕೆ ವಿರುದ್ಧ ಬಿಎಸ್ವೈ ಚಾಟಿ</strong></p>.<p>ಕಾಂಗ್ರೆಸ್ನ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ರಾಜ್ಯದ ಜನತೆಗೆ ಅಪಮಾನ ಮಾಡಿದ್ದಾರೆ ಎಂದು ಯಡಿಯೂರಪ್ಪ ಚಾಟಿ ಬೀಸಿದರು.</p>.<p>ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು ₹ 50 ಸಾವಿರದವರೆಗಿನ ಸಾಲ ಮನ್ನಾ ಮಾಡಿದ್ದಾರೆ. ಮತ್ತೆ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಲ ಮಾಡುತ್ತೇನೆ ಎಂದು ಬೂಟಾಟಿಕೆ ಹೇಳಿಕೆಗಳನ್ನು ಕುಮಾರಸ್ವಾಮಿ ನೀಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಕಳೆದ ಮೂರು ತಿಂಗಳಿನಿಂದ ಅಭಿವೃದ್ಧಿ ಸ್ಥಗಿತವಾಗಿದೆ. ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಇನ್ನೂ ನಡೆದಿಲ್ಲ. ಇದಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯದ ಜನತೆ ಈ ದೊಂಬರಾಟ ನೋಡುವಂತಾಗಿದೆ ಎಂದು ವ್ಯಂಗ್ಯವಾಡಿದರು.</p>.<p>‘ಇನ್ನು 15 ದಿನಗಳ ಕಾಲ ಸುಮ್ಮನಿರುತ್ತೇನೆ. ಸರ್ಕಾರದ ನಡೆ ನೋಡಿ ಮುಂದಿನ ಹೋರಾಟದ ರೂಪರೇಷೆಗಳನ್ನು ನಿರ್ಧರಿಸಲಾಗುವುದು. ಕಾಂಗ್ರೆಸ್ನ ಆಶ್ರಯದಲ್ಲಿರುವ ಜೆಡಿಎಸ್ ಸರ್ಕಾರ ಕುರಿತು ಜಾಗ್ರತೆಯಿಂದಿರಬೇಕು’ ಎಂದರು.</p>.<p>ಕೆ.ಆರ್.ವಿಧಾನಸಭಾ ಕ್ಷೇತ್ರದಲ್ಲಿ ಅಧಿಕ ಮತಗಳನ್ನು ಬಿಜೆಪಿಗೆ ನೀಡುವಲ್ಲಿ ಯಶಸ್ಸು ಕಂಡ ಬೂತ್ಮಟ್ಟದ ಪಕ್ಷದ ಕಾರ್ಯಕರ್ತರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ನಂಜುಂಡಸ್ವಾಮಿ, ಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಬಿ.ವಿ.ಮಂಜುನಾಥ್, ಮಹದೇವಮ್ಮ, ಮುಖಂಡರಾದ ರಾಜೇಂದ್ರ, ತೋಂಟದಾರ್ಯ, ನಿರಂಜನಮೂರ್ತಿ, ಎಚ್.ಆರ್.ಸುರೇಶ್ಬಾಬು, ರಮೇಶ್ ಹಾಜರಿದ್ದರು.</p>.<p>**<br /> ಮೂರೂವರೆ ಸಾವಿರಕ್ಕೂ ಅಧಿಕ ಮನೆಗಳನ್ನು ವಸತಿರಹಿತರಿಗೆ ನೀಡಲಾಗಿದೆ. ಇನ್ನು 24 ತಿಂಗಳಲ್ಲಿ ಬೆಂಗಳೂರು – ಮೈಸೂರು ಅಷ್ಟಪಥ ಹೆದ್ದಾರಿ ನಿರ್ಮಾಣವಾಗಲಿದೆ<br /> <strong>- ಪ್ರತಾಪಸಿಂಹ, ಸಂಸದ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>