ಭೋಪಾಲ್: ಮಧ್ಯಪ್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕಮಲ್ನಾಥ್ ಅವರಿಗೆ ವಿಶ್ವಾಸಮತ ಯಾಚಿಸಲು ಸೋಮವಾರ ಅವಕಾಶ ನೀಡುವಂತೆ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿಗೆ ನಿರ್ದೇಶಿಸಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಅವರು, ‘ಮಧ್ಯಪ್ರದೇಶದ ವಿಧಾನಸಭೆ ಅಧಿವೇಶನವು ಮಾರ್ಚ್ 16ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ನಾನು ವಿಧಾನಸಭೆ ಉದ್ದೇಶಿಸಿ ಮಾತನಾಡಿದ ನಂತರ, ವಿಶ್ವಾಸಮತ ಯಾಚನೆಗೆ ಸ್ವೀಕರ್ ಅವಕಾಶ ನೀಡಲಿದ್ದಾರೆ’ ಎಂದು ರಾಜ್ಯಪಾಲರು ತಿಳಿಸಿದ್ದಾರೆ.
‘ಗುಂಡಿಯನ್ನು ಒತ್ತುವ ಮೂಲಕ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಯಲಿದೆ. ಬೇರೆ ಯಾವುದೇ ಮತದಾನ ವಿಧಾನ ಸ್ವೀಕಾರಾರ್ಹವಾಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.