<p><strong>ಮುಂಬೈ:</strong> ನಮ್ಮ ಪಕ್ಷದ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಸುರಕ್ಷಿತವಾಗಿದೆ. 'ಮಧ್ಯಪ್ರದೇಶದ ವೈರಸ್' ಪಶ್ಚಿಮ ರಾಜ್ಯಕ್ಕೆ ಪ್ರವೇಶಿಸುವುದಿಲ್ಲ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ತಿಳಿಸಿದ್ದಾರೆ.</p>.<p>ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, 'ಮಹಾರಾಷ್ಟ್ರ ವಿಕಾಸ್ ಅಘಡಿ (MVA) ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.<br />ಮಧ್ಯಪ್ರದೇಶದ ವೈರಸ್ ಮಹಾರಾಷ್ಟ್ರಕ್ಕೆ ಪ್ರವೇಶಿಸುವುದಿಲ್ಲ. ಮಹಾರಾಷ್ಟ್ರದ ಶಕ್ತಿಯು ಭಿನ್ನವಾಗಿದೆ. ಇಂತದ್ದೇ ಒಂದು ಕಾರ್ಯಾಚರಣೆಯೂ 100 ದಿನಗಳ ಹಿಂದಷ್ಟೇ ನೆಲಕಚ್ಚಿದೆ. ಮಹಾ ವಿಕಾಸ್ ಅಘಡಿ ಸರ್ಕಾರವು ಬೈಪಾಸ್ ಸರ್ಜರಿ ಮಾಡಿತು ಮತ್ತು ಮಹಾರಾಷ್ಟ್ರವನ್ನು ಕಾಪಾಡಿದೆ' ಎಂದು ಮರಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಕಳೆದ ವರ್ಷದ ಅಕ್ಟೋಬರ್ನಲ್ಲಿ ನಡೆದ ವಿಧಾನಸಭೆ ಚುನಾವಣೆ ಬಳಿಕ ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿಯಿಂದ ಹೊರನಡೆದ ಶಿವಸೇನಾ, ಮಹಾರಾಷ್ಟ್ರದಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗೆ ಮೈತ್ರಿ ಸರ್ಕಾರವನ್ನು ರಚಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/pm-modi-busy-destabilising-an-elected-govt-says-rahul-gandhi-711466.html" itemprop="url">ಚುನಾಯಿತ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವಲ್ಲಿ ಮೋದಿ ಬ್ಯುಸಿ: ರಾಹುಲ್ ಗಾಂಧಿ </a></p>.<p>ಮಧ್ಯಪ್ರದೇಶದಲ್ಲಿ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ಕೇಂದ್ರದ ಮಾಜಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ರಾಜೀನಾಮೆ ಬಳಿಕ 22 ಶಾಸಕರು ರಾಜೀನಾಮೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ನಮ್ಮ ಪಕ್ಷದ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಸುರಕ್ಷಿತವಾಗಿದೆ. 'ಮಧ್ಯಪ್ರದೇಶದ ವೈರಸ್' ಪಶ್ಚಿಮ ರಾಜ್ಯಕ್ಕೆ ಪ್ರವೇಶಿಸುವುದಿಲ್ಲ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ತಿಳಿಸಿದ್ದಾರೆ.</p>.<p>ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, 'ಮಹಾರಾಷ್ಟ್ರ ವಿಕಾಸ್ ಅಘಡಿ (MVA) ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.<br />ಮಧ್ಯಪ್ರದೇಶದ ವೈರಸ್ ಮಹಾರಾಷ್ಟ್ರಕ್ಕೆ ಪ್ರವೇಶಿಸುವುದಿಲ್ಲ. ಮಹಾರಾಷ್ಟ್ರದ ಶಕ್ತಿಯು ಭಿನ್ನವಾಗಿದೆ. ಇಂತದ್ದೇ ಒಂದು ಕಾರ್ಯಾಚರಣೆಯೂ 100 ದಿನಗಳ ಹಿಂದಷ್ಟೇ ನೆಲಕಚ್ಚಿದೆ. ಮಹಾ ವಿಕಾಸ್ ಅಘಡಿ ಸರ್ಕಾರವು ಬೈಪಾಸ್ ಸರ್ಜರಿ ಮಾಡಿತು ಮತ್ತು ಮಹಾರಾಷ್ಟ್ರವನ್ನು ಕಾಪಾಡಿದೆ' ಎಂದು ಮರಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಕಳೆದ ವರ್ಷದ ಅಕ್ಟೋಬರ್ನಲ್ಲಿ ನಡೆದ ವಿಧಾನಸಭೆ ಚುನಾವಣೆ ಬಳಿಕ ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿಯಿಂದ ಹೊರನಡೆದ ಶಿವಸೇನಾ, ಮಹಾರಾಷ್ಟ್ರದಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗೆ ಮೈತ್ರಿ ಸರ್ಕಾರವನ್ನು ರಚಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/pm-modi-busy-destabilising-an-elected-govt-says-rahul-gandhi-711466.html" itemprop="url">ಚುನಾಯಿತ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವಲ್ಲಿ ಮೋದಿ ಬ್ಯುಸಿ: ರಾಹುಲ್ ಗಾಂಧಿ </a></p>.<p>ಮಧ್ಯಪ್ರದೇಶದಲ್ಲಿ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ಕೇಂದ್ರದ ಮಾಜಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ರಾಜೀನಾಮೆ ಬಳಿಕ 22 ಶಾಸಕರು ರಾಜೀನಾಮೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>