ಚೆನ್ನೈ: ದಿನಕರನ್ ಬಣದಲ್ಲಿ ಗುರುತಿಸಿಕೊಂಡಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರು ಅನರ್ಹರು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.ಶಾಸಕರನ್ನು ಅನರ್ಹಗೊಳಿಸಿದ್ದ ತಮಿಳುನಾಡು ಸ್ಪೀಕರ್ ನಿರ್ಧಾರವನ್ನು ಸರಿ ಎಂದು ಹೇಳಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತ್ಯ ನಾರಾಯಣ್ ಈ ತೀರ್ಪು ನೀಡಿದ್ದಾರೆ.
ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿ 2017 ಸೆಪ್ಟೆಂಬರ್ 18ರಂದು ಸ್ಪೀಕರ್ ಪಿ.ಧನಪಾಲನ್ ಅವರನ್ನು ಸಮೀಪಿಸಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರನ್ನು ಅನರ್ಹ ಮಾಡಲಾಗಿತ್ತು. ಸ್ಪೀಕರ್ ಅವರ ತೀರ್ಮಾನವನ್ನು ಪ್ರಶ್ನಿಸಿ ಈ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದರು.
1986ರ ಪಕ್ಷಾಂತರ ವಿರೋಧಿ ಮತ್ತು ಅನರ್ಹತೆ ನಿಯಮಗಳ ಅಡಿಯಲ್ಲಿ 18 ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಹೈಕೋರ್ಟ್ ನ ವಿಭಾಗೀಯ ಪೀಠ ಕೂಡಾ ಶಾಸಕರು ಅನರ್ಹರು ಎಂದು ಹೇಳಿದ ಕಾರಣ ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ
It is not a setback for us. This is an experience, we will face the situation. Future course of action will be decided after meeting with the 18 MLAs: TTV Dinakaran on disqualification of 18 AIADMK MLAs upheld by Madras HC pic.twitter.com/yg1K9VDSLb
ತೀರ್ಪಿನ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಟಿಟಿವಿ ದಿನಕರನ್, ಇದು ಹಿನ್ನಡೆ ಎಂದು ನಾವು ಹೇಳುವುದಿಲ್ಲ, ಇದು ಅನುಭವ. ಈ ಪರಿಸ್ಥಿತಿಯನ್ನು ನಾವು ನಿಭಾಯಿಸುತ್ತೇವೆ. 18 ಶಾಸಕರು ಸಭೆ ಸೇರಿ ತೀರ್ಮಾನ ಕೈಗೊಳುತ್ತೇವೆ ಎಂದಿದ್ದಾರೆ.