‘ಏಪ್ರಿಲ್ 30 ರಿಂದ ಮೇ 15ರ ನಡುವೆ ಕೊರೊನಾ ಸೋಂಕು ಹರಡುವಿಕೆ ಹೆಚ್ಚಲಿದೆ ಎಂದು ಕೇಂದ್ರ ಸರ್ಕಾರ ಭಾವಿಸಿದರೆ, ನಗರದಲ್ಲಿ ಸಿಲುಕಿರುವ ಕಾರ್ಮಿಕರನ್ನು ಅದಕ್ಕೂ ಮೊದಲು ತಮ್ಮ ಊರುಗಳಿಗೆ ಕಳುಹಿಸುವ ಅವಕಾಶವಿದೆಯೇ ಎನ್ನುವುದನ್ನು ಪರಿಗಣಿಸಬೇಕು. ಸಾಧ್ಯವಾದಲ್ಲಿ, ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಬೇಕು’ ಎಂದು ತಿಳಿಸಿದ್ದಾರೆ.