ಮಹದಾಯಿ ಜಲ ವಿವಾದದ ಪರಿಹಾರ ನ್ಯಾಯಮಂಡಳಿಯು 2018ರಲ್ಲಿ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರವು ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಹಾಗಾಗಿ, ಮಹದಾಯಿ ನದಿಯಿಂದ ನೀರು ತಿರುಗಿಸುವ ಕಲಸಾ ಬಂಡೂರಿ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲು ಹಸಿರು ನಿಶಾನೆ ಸಿಕ್ಕಂತಾಗಿದೆ. ಆದರೆ, ಹೀಗೆ ನೀರು ತಿರುಗಿಸುವುದರಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತದೆ ಎಂದು ಗೋವಾ ವಾದಿಸುತ್ತಿದೆ.