ಮಹದಾಯಿ ಅಧಿಸೂಚನೆಗೆ ಗೋವಾ ಸರ್ಕಾರ ಸಮ್ಮತಿ ಸೂಚಿಸಿದ್ದು, ಕಳಸಾ– ಬಂಡೂರಿ ತಿರುವು ಯೋಜನೆ ಕಾಮಗಾರಿಗೆ ಒಪ್ಪಿಗೆ ನೀಡದಂತೆ ಕೋರಿದೆ. ರಾಜ್ಯ ಸರ್ಕಾರವು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಬೇಕಿದ್ದು, ಅಧಿಸೂಚನೆ ಹೊರಡಿಸಿದರೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.