ಔರಂಗಾಬಾದ್: ದಲಿತ ಮಹಿಳೆಯೊಬ್ಬರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಅಂಧಾರಿ ಗ್ರಾಮದಲ್ಲಿ ನಡೆದಿದೆ.
‘ಏಕಾಂಗಿಯಾಗಿ ವಾಸಿಸುತ್ತಿದ್ದ ಐವತ್ತು ವರ್ಷದ ದಲಿತ ಮಹಿಳೆ ಮನೆಗೆ ಅದೇ ಗ್ರಾಮದ ಸಂತೋಷ್ ಮೊಹಿತೆ ಎಂಬಾತ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ. ಆದರೆ, ಮಹಿಳೆ ಆತನಿಗೆ ಅವಕಾಶ ನೀಡಿರಲಿಲ್ಲ. ಇದೇ ಕಾರಣಕ್ಕೆ ಆತ ಮಹಿಳೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಶೇ 90ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.