ಶಿವಸೇನಾ–ಕಾಂಗ್ರೆಸ್–ಎನ್ಸಿಪಿ ಹಾಗೂ ಇತರ ಕೆಲವು ಸಣ್ಣಪಕ್ಷಗಳ ಮೈತ್ರಿಕೂಟವಾದ ‘ಮಹಾ ಅಘಾಡಿ’ಯು ನ. 28ರಂದು ಮಹಾರಾಷ್ಟ್ರದಲ್ಲಿ ಅಧಿಕಾರ ವಹಿಸಿಕೊಂಡಿತ್ತು. ಅಧಿಕಾರ ಸ್ವೀಕರಿಸಿ ಸುಮಾರು ಒಂದು ತಿಂಗಳ ನಂತರ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಉದ್ಧವ್ ಮುಂದಾಗಿದ್ದು, ಮುಖ್ಯಮಂತ್ರಿಗೆ ಇದು ಅತ್ಯಂತ ಸವಾಲಿನ ಹಂತವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.