ರಾಜ್ಯಪಾಲರ ಕೋಟಾದಲ್ಲಿ ನಾಮನಿರ್ದೇಶನ ಮಾಡುವಂತೆ ಮಹಾ ವಿಕಾಸ್ ಅಘಾಡಿ (ಶಿವಸೇನಾ, ಎನ್ಸಿಪಿ, ಕಾಂಗ್ರೆಸ್ ಮೈತ್ರಿ) ನಾಯಕರು ಬುಧವಾರ ಕೋಶಿಯಾರಿ ಅವರನ್ನು ಭೇಟಿಯಾಗಿ ಎರಡನೇ ಬಾರಿಗೆ ಮನವಿ ಮಾಡಿದ್ದರು. ಇದಾದ ಮರುದಿನವೇ ಠಾಕ್ರೆ ಪ್ರಧಾನಿಗೆ ಕರೆ ಮಾಡಿ ಮಾತನಾಡಿದ್ದಾರೆ.ಕಾನೂನಿನ ಪ್ರಕಾರ ಸಚಿವಸಂಪುಟ ಶಿಫಾರಸನ್ನು ಅನುಮೋದಿಸಬೇಕಾದ್ದು ರಾಜ್ಯಪಾಲರ ಕರ್ತವ್ಯ. ಆದರೆ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಮಹಾ ವಿಕಾಸ್ ಅಘಾಡಿ ನಾಯಕರು ಆರೋಪಿಸಿದ್ದಾರೆ.
ವಿಧಾನಸಭೆ ಮತ್ತು ಪರಿಷತ್ ಎರಡರಲ್ಲೂ ಸದಸ್ಯರಲ್ಲದ ಠಾಕ್ರೆ 2019ರ ನವೆಂಬರ್ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಹೀಗಾಗಿ ಮೇ 28ರ ಒಳಗೆ ಅವರು ವಿಧಾನಸಭೆ ಅಥವಾ ಪರಿಷತ್ ಈ ಎರಡರಲ್ಲಿ ಒಂದರ ಸದಸ್ಯರಾಗಿ ಆಯ್ಕೆಯಾಗಬೇಕಿದೆ.