ಮುಂಬೈ: ದೆಹಲಿಯ ನಿಜಾಮುದ್ದೀನ್ನಲ್ಲಿ ತಬ್ಲೀಗ್ ಜಮಾತ್ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯದ 1,400 ಜನರನ್ನು ಪತ್ತೆ ಮಾಡಲಾಗಿದೆ. ಇವರನ್ನು ಜಿಲ್ಲಾಡಳಿತಗಳು ಕ್ವಾರಂಟೈನ್ ಮಾಡಿ, ನಿಗಾ ವಹಿಸಿವೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.