ಸೋಮವಾರ ಸಂಜೆ ಸೋನಿಯಾ ಅವರನ್ನು ಭೇಟಿಯಾದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪವಾರ್, ‘ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಬಗ್ಗೆ ಮತ್ತು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿಲ್ಲ. ಆದರೆ ಸದ್ಯದ ರಾಜಕೀಯ ಪರಿಸ್ಥಿತಿ ಮತ್ತು ಸಂಖ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ. ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯೂ ನಮ್ಮ ಜತೆಗಿದೆ. ಅವರ ಅಭ್ಯರ್ಥಿಯೂ ಶಾಸಕರಾಗಿದ್ದಾರೆ. ಅವರನ್ನು ನಾವು ಕಡೆಗಣಿಸುವಂತಿಲ್ಲ. ಎಸ್ಪಿಗೂ ಕೆಲವು ಸೀಟುಗಳನ್ನು ಬಿಟ್ಟುಕೊಟ್ಟಿದ್ದೆವು. ಅವರ ಅಭ್ಯರ್ಥಿಗಳೂ ಗೆಲುವು ಸಾಧಿಸಿದ್ದಾರೆ. ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ. ಯಾರ ಜತೆ ಸೇರುವ ಬಗ್ಗೆಯೂ ಚರ್ಚೆ ನಡೆಸಿಲ್ಲ’ ಎಂದು ಹೇಳಿದ್ದಾರೆ.