ಮಹಾರಾಷ್ಟ್ರದಲ್ಲಿ 14 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿಯೂ ಕೆಲ ಪ್ರಭಾವಿಗಳ ಹೆಸರು ಕೈಬಿಡಲಾಗಿದೆ.ಸಚಿವರಾದ ಏಕನಾಥ ಖಡಸೆ, ವಿನೋದ್ ತಾವ್ಡೆ ಹಾಗೂ ಪ್ರಕಾಶ್ ಮೆಹ್ತಾಅವರ ಹೆಸರು ಪಟ್ಟಿಯಲ್ಲಿಲ್ಲ. ಇವರಿಗೆ ಎರಡನೇ ಪಟ್ಟಿಯಲ್ಲಿ ಸ್ಥಾನ ಸಿಗಬಹುದು ಎಂದೇ ಹೇಳಲಾಗಿತ್ತು. ಇದರಿಂದ ಪಕ್ಷದಲ್ಲಿ ಭಿನ್ನಮತ ಎದುರಾಗುವ ಸಾಧ್ಯತೆ ಇದೆ.ಮರಾಠ ಸಮುದಾಯದ ತಾವ್ಡೆ ಅವರು ಹಿಂದೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಆಗಿದ್ದರು.ಪ್ರಕಾಶ್ ಮೆಹತಾ ಅವರುಮಹಾರಾಷ್ಟ್ರದಲ್ಲಿ ಬಿಜೆಪಿಯ ಗುಜರಾತಿ ಸಮುದಾಯದ ಪ್ರತಿನಿಧಿಯಾಗಿದ್ದಾರೆ.