‘ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಮೇಲೆ ಏನೇನು ಮಾಡ್ತೀವಿ ಅಂಥ ಮಾತನಾಡುತ್ತಿದ್ದಾರೆ. ಇಂಥ ಮಾತು ಮುಖ್ಯವಲ್ಲ. ಮುಖ್ಯಮಂತ್ರಿ ಆಗಿದ್ದಾಗ ಏನೇನು ಮಾಡಿದೀರಿ ಎನ್ನುವುದನ್ನು ಜನರಿಗೆ ಹೇಳಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರವು ನೂರಕ್ಕೆ ನೂರು ಭ್ರಷ್ಟವಾಗಿತ್ತು. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರೋದಿಲ್ಲ ಎನ್ನುವುದು ಕುಮಾರಸ್ವಾಮಿ ಅವರಿಗೆ ಚೆನ್ನಾಗಿ ಗೊತ್ತಿದೆ. ಅದಕ್ಕಾಗಿ ರೈತರ ಸಾಲವನ್ನೆಲ್ಲ ಮನ್ನಾ ಮಾಡ್ತಿನಿ ಎಂದು ಹೇಳುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.