ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎನ್‌ಯು ದಾಂದಲೆ: ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಚಿವರ ಸಾಥ್

Last Updated 6 ಜನವರಿ 2020, 11:58 IST
ಅಕ್ಷರ ಗಾತ್ರ

ಮುಂಬೈ: ದೆಹಲಿಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ಭಾನುವಾರನಡೆದ ದಾಂದಲೆ ಖಂಡಿಸಿ ಮುಂಬೈನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಹಾರಾಷ್ಟ್ರದ ಸಚಿವ ಜಿತೇಂದ್ರ ಅವಹದ್ ಸಾಥ್ ನೀಡಿದ್ದಾರೆ.

ಜೆಎನ್‌ಯು ದಾಂದಲೆ ಖಂಡಿಸಿ ಮುಂಬೈಯಲ್ಲಿ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಜತೆ ಕೈಜೋಡಿಸಿದ ಸಚಿವರು, ಜನ ವಿಚಾರವಂತರಿಗೆ ಹೆದರುತ್ತಾರೆ ಎಂದರೆ ಅಲ್ಲಿ ಅರಾಜಕತೆ ಇದೆ ಎಂದು ಹೇಳಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಮತ್ತು ಶಿಕ್ಷಕರ ಮೇಲೆ ಯೋಜಿತ ದಾಳಿ ನಡೆಸಲಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಮನ ಮಾಡುವುದಕ್ಕಾಗಿ ಹಿಂಸಾಚಾರ ಮಾಡಲಾಗಿದೆ. ಇದಕ್ಕೆ ಯಾವತ್ತೂ ಜಯ ಸಿಗುವುದಿಲ್ಲ ಎಂದು ಎನ್‌ಸಿಪಿಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿರುವ ವಿದ್ಯಾರ್ಥಿಗಳು ಸುರಕ್ಷಿತ ಎಂದು ಭರವಸೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ಠಾಕ್ರೆ, ಈ ರೀತಿಯ ನಡೆಗಳನ್ನು ಸಹಿಸುವುದಿಲ್ಲ.ಜೆಎನ್‌ಯು ಮೇಲಿನ ದಾಳಿ 26/11ರ ಉಗ್ರರ ದಾಳಿಯನ್ನು ನೆನಪಿಸಿತುಎಂದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT