ರಾಜಭವನದಲ್ಲಿ ಶನಿವಾರ ಮುಂಜಾನೆ 7.30ಕ್ಕೆ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಪ್ರಮಾಣವಚನ ಬೋಧಿಸಿದರು. ಇದಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ‘ಬಿಜೆಪಿಯನ್ನು ಬೆಂಬಲಿಸುವ ಅಜಿತ್ ಪವಾರ್ ಅವರ ನಿರ್ಧಾರ ಪಕ್ಷದ ತೀರ್ಮಾನವಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದರು.