ರಾಜ್ಯಪಾಲರು ಮೊದಲು ನಮಗೆ ಸರ್ಕಾರ ರಚಿಸಲು ಆಹ್ವಾನಿಸಿದರು. ನಂತರ ಶಿವಸೇನಾ, ಎನ್ಸಿಪಿಗೆ ಆಹ್ವಾನ ಕೊಟ್ಟರು. ವಿಫಲವಾದ ನಂತರ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದರು.ಆ ಮೂರೂ ಪಕ್ಷಗಳು ಪ್ರತ್ಯೇಕ ಸಿದ್ಧಾಂತ ಹೊಂದಿವೆ. ಈಗ ಅವರು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಹೆಸರಿನಲ್ಲಿ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ.ಇದು ಕನಿಷ್ಠ ಕಾರ್ಯಕ್ರಮವೂ ಅಲ್ಲ, ಗರಿಷ್ಠ ಕಾರ್ಯಕ್ರಮವೂ ಅಲ್ಲ. ಈ ಮೂರು ಪಕ್ಷಗಳು ಒಟ್ಟಿಗೆ ಇರಲು ಸಾಧ್ಯವೂ ಇಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಷ್ಟೇ ಅವರ ಉದ್ದೇಶ ಎಂದು ಫಡಣವೀಸ್ ಹೇಳಿದರು.