ಮುಂಬೈ:ಮಹಾರಾಷ್ಟ್ರದಲ್ಲಿ 50:50 ಆಧಾರದಲ್ಲಿ ಸರ್ಕಾರ ರಚಿಸುವ ಬಗ್ಗೆ ಶಿವಸೇನಾಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತು ಕೊಟ್ಟಿರಲಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಸರ್ಕಾರ ರಚನೆ ಕಗ್ಗಂಟು ಬಿಗಿಯಾಗಿರುವ ಸಂದರ್ಭದಲ್ಲೇ ಆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಇನ್ನೂ ಸಮಯವಿದೆ. ಜನರ ಕಲ್ಯಾಣಕ್ಕಾಗಿ ಬಿಜೆಪಿ–ಶಿವಸೇನಾ ಮುಂದೆ ಬಂದು ಸರ್ಕಾರ ರಚಿಸಬೇಕು’ ಎಂದು ಹೇಳಿದ್ದಾರೆ.
ಉಭಯ ಪಕ್ಷಗಳ ನಡುವಣಹಗ್ಗಜಗ್ಗಾಟ ತೀವ್ರಗೊಂಡಿರುವ ಬೆನ್ನಲ್ಲೇದೇವೇಂದ್ರ ಫಡಣವೀಸ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.