ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿ ಮಿತ್ರಪಕ್ಷ ಬಿಜೆಪಿ ಜತೆಗಿನ ಹಗ್ಗಜಗ್ಗಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಶಿವಸೇನಾ ಶಾಸಕನನ್ನೇ ಮುಖ್ಯಮಂತ್ರಿ ಮಾಡುವುದಾಗಿ ನಾನು ಜನರಿಗೆ ಮಾತು ಕೊಟ್ಟಿದ್ದೆ. ಬಿಜೆಪಿ ಮತ್ತು ಶಿವಸೇನಾ 25 ವರ್ಷಗಳಿಂದ ಜತೆಯಾಗಿವೆ. ಅಧಿಕಾರದಲ್ಲಿ ಸಮಾನ ಪಾಲು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಬಳಿಯೂ ಹೇಳಿದ್ದೆ’ ಎಂದರು.