‘ಹಿಂಬಾಗಿಲ ಮಾತುಕತೆ ಪ್ರಶ್ನೆಯೇ ಇಲ್ಲ. ಬಿಕ್ಕಟ್ಟು ಸೃಷ್ಟಿಯಾಗಿರುವುದಕ್ಕೆ ನಾವು ಕಾರಣವಲ್ಲ. ಬಿಜೆಪಿ ಮೊದಲು ಸರ್ಕಾರ ರಚನೆಗೆ ಹಕ್ಕು ಮಂಡಿಸಬೇಕು. ಅವರು ವಿಫಲವಾದ್ರೆ ನಾವು ಹಕ್ಕು ಮಂಡಿಸುತ್ತೇವೆ’ ಎಂದು ರಾವತ್ ಹೇಳಿದ್ದಾರೆ. ಎನ್ಸಿಪಿ ನಾಯಕ ಮತ್ತು ಶರದ್ ಪವಾರ್ ಅವರ ಸಂಬಂಧಿ ಅಜಿತ್ ಪವಾರ್ ಅವರಿಗೆ ಶಿವಸೇನೆಯ ನಾಯಕ ಸಂಜಯ್ ರಾವುತ್ ಭಾನುವಾರ ಸಂದೇಶ ಕಳುಹಿಸಿದ್ದು ರಾಜ್ಯ ರಾಜಕೀಯ ತಿರುವು ಪಡೆಯುವ ಸುಳಿವು ನೀಡಿತ್ತು.