<p><strong>ಮುಂಬೈ</strong>: ಮಹಾರಾಷ್ಟ್ರ ವಿಧಾನಸಭೆಗೆ ಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮತ್ತೆ ಮುಂದುವರಿಯಲಿದೆ.</p>.<p>ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಬರ ಮಾಡಿಕೊಂಡ ನಂತರ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ‘ಉಭಯ ಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಲಿವೆ. ಈ ಬಾರಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಹಿಂದಿನ ದಾಖಲೆಗಳನ್ನು ನಮ್ಮ ಮೈತ್ರಿ ಮುರಿಯಲಿದೆ’ ಎಂದರು.</p>.<p>ಎನ್ಸಿಪಿಯ ಮೂವರು ಹಾಗೂ ಕಾಂಗ್ರೆಸ್ನ ಒಬ್ಬ ಶಾಸಕರು ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಫಡಣವೀಸ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ ಪಾಟೀಲ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬುಧವಾರ ಸೇರ್ಪಡೆಯಾದರು.</p>.<p>ಇತ್ತೀಚೆಗೆ ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿಗೆ ವಲಸೆ ಹೋಗುತ್ತಿದ್ದಾರೆ. ಪಕ್ಷ ತೊರೆದು ಬಂದವರಿಗೆ ಟಿಕೆಟ್ ನೀಡಬೇಕಾದ ಒತ್ತಡದಲ್ಲಿರುವ ಬಿಜೆಪಿ ಈ ಬಾರಿ ಶಿವಸೇನಾ ಜೊತೆ ಮೈತ್ರಿಗೆ ಮುಂದಾಗುವುದಿಲ್ಲ ಎಂಬ ವದಂತಿ ಇತ್ತು. ಫಡಣವೀಸ್ ಅವರ ಈ ಹೇಳಿಕೆಯಿಂದ ಇಂತಹ ಎಲ್ಲ ವದಂತಿಗೆ ತೆರೆಬಿದ್ದಿದೆ.</p>.<p>ಈ ಎರಡೂ ಪಕ್ಷಗಳು 2014ರಲ್ಲಿ ಪ್ರತ್ಯೇಕವಾಗಿಯೇ ಚುನಾವಣೆಯನ್ನು ಎದುರಿಸಿದ್ದವು. ಫಲಿತಾಂಶ ಹೊರ ಬಿದ್ದ ನಂತರ ಸರ್ಕಾರ ರಚನೆಗಾಗಿ ಎರಡೂ ಪಕ್ಷಗಳು ಕೈಜೋಡಿಸಿವೆ.</p>.<p>ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ತಲುಪುವ ದೃಷ್ಟಿಯಿಂದ ‘ಮಹಾಜನಾದೇಶ ಯಾತ್ರಾ’ ಎಂಬ ತಿಂಗಳ ಅವಧಿಯ ಕಾರ್ಯಕ್ರಮಕ್ಕೆ ಫಡಣವೀಸ್ ಚಾಲನೆ ನೀಡಲಿದ್ದಾರೆ. ಗುರುವಾರ (ಆಗಸ್ಟ್ 1) ಅಮರಾವತಿ ಜಿಲ್ಲೆಯಿಂದ ಈ ಯಾತ್ರೆ ಆರಂಭಗೊಳ್ಳಲಿದ್ದು, ಆಗಸ್ಟ್ 31ರಂದು ನಾಸಿಕ್ನಲ್ಲಿ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ವಿಧಾನಸಭೆಗೆ ಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮತ್ತೆ ಮುಂದುವರಿಯಲಿದೆ.</p>.<p>ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಬರ ಮಾಡಿಕೊಂಡ ನಂತರ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ‘ಉಭಯ ಪಕ್ಷಗಳು ಒಟ್ಟಿಗೆ ಚುನಾವಣೆ ಎದುರಿಸಲಿವೆ. ಈ ಬಾರಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಹಿಂದಿನ ದಾಖಲೆಗಳನ್ನು ನಮ್ಮ ಮೈತ್ರಿ ಮುರಿಯಲಿದೆ’ ಎಂದರು.</p>.<p>ಎನ್ಸಿಪಿಯ ಮೂವರು ಹಾಗೂ ಕಾಂಗ್ರೆಸ್ನ ಒಬ್ಬ ಶಾಸಕರು ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಫಡಣವೀಸ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ ಪಾಟೀಲ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬುಧವಾರ ಸೇರ್ಪಡೆಯಾದರು.</p>.<p>ಇತ್ತೀಚೆಗೆ ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿಗೆ ವಲಸೆ ಹೋಗುತ್ತಿದ್ದಾರೆ. ಪಕ್ಷ ತೊರೆದು ಬಂದವರಿಗೆ ಟಿಕೆಟ್ ನೀಡಬೇಕಾದ ಒತ್ತಡದಲ್ಲಿರುವ ಬಿಜೆಪಿ ಈ ಬಾರಿ ಶಿವಸೇನಾ ಜೊತೆ ಮೈತ್ರಿಗೆ ಮುಂದಾಗುವುದಿಲ್ಲ ಎಂಬ ವದಂತಿ ಇತ್ತು. ಫಡಣವೀಸ್ ಅವರ ಈ ಹೇಳಿಕೆಯಿಂದ ಇಂತಹ ಎಲ್ಲ ವದಂತಿಗೆ ತೆರೆಬಿದ್ದಿದೆ.</p>.<p>ಈ ಎರಡೂ ಪಕ್ಷಗಳು 2014ರಲ್ಲಿ ಪ್ರತ್ಯೇಕವಾಗಿಯೇ ಚುನಾವಣೆಯನ್ನು ಎದುರಿಸಿದ್ದವು. ಫಲಿತಾಂಶ ಹೊರ ಬಿದ್ದ ನಂತರ ಸರ್ಕಾರ ರಚನೆಗಾಗಿ ಎರಡೂ ಪಕ್ಷಗಳು ಕೈಜೋಡಿಸಿವೆ.</p>.<p>ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ತಲುಪುವ ದೃಷ್ಟಿಯಿಂದ ‘ಮಹಾಜನಾದೇಶ ಯಾತ್ರಾ’ ಎಂಬ ತಿಂಗಳ ಅವಧಿಯ ಕಾರ್ಯಕ್ರಮಕ್ಕೆ ಫಡಣವೀಸ್ ಚಾಲನೆ ನೀಡಲಿದ್ದಾರೆ. ಗುರುವಾರ (ಆಗಸ್ಟ್ 1) ಅಮರಾವತಿ ಜಿಲ್ಲೆಯಿಂದ ಈ ಯಾತ್ರೆ ಆರಂಭಗೊಳ್ಳಲಿದ್ದು, ಆಗಸ್ಟ್ 31ರಂದು ನಾಸಿಕ್ನಲ್ಲಿ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>