<p><strong>ಮುಂಬೈ:</strong> ಮಹಾರಾಷ್ಟ್ರದ ಬರಪೀಡಿತ ಮರಾಠವಾಡ ಮತ್ತು ವಿದರ್ಭ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಜನರು ಹರ್ಷಗೊಂಡಿದ್ದಾರೆ. ಈ ಪ್ರದೇಶಗಳ ಹಲವು ನದಿಗಳು ತುಂಬಿ ಹರಿಯುತ್ತಿವೆ.</p>.<p>ಕರಾವಳಿಯ ಕೊಂಕಣ ಪ್ರದೇಶ, ಪಶ್ಚಿಮ ಮಹಾರಾಷ್ಟ್ರ ಮತ್ತು ಉತ್ತರ ಮಹಾರಾಷ್ಟ್ರಗಳಲ್ಲಿಯೂ ಶುಕ್ರವಾರ ಮತ್ತು ಶನಿವಾರ ಉತ್ತಮ ಮಳೆಯಾಗಿದೆ. ಗೋದಾವರಿ, ಕೃಷ್ಣಾ, ಕೊಯ್ನಾ, ಪಂಚಗಂಗಾ ಮತ್ತು ಇಂದ್ರಾವತಿಯಂತಹ ದೊಡ್ಡ ನದಿಗಳು ಉಕ್ಕಿ ಹರಿಯುತ್ತಿವೆ. ನಾಗಪುರ ನಗರದಲ್ಲಿಯೂ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.</p>.<p>ಮಹಾರಾಷ್ಟ್ರ ಮತ್ತು ಮುಂಬೈಯಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಉಪ ಮಹಾನಿರ್ದೇಶಕ ಕೆ.ಎಸ್. ಹೊಸಳಿಕರ್ ಹೇಳಿದ್ದಾರೆ.</p>.<p>ನಾಸಿಕ್ನ ಪವಿತ್ರ ರಾಮಕುಂಡ ಪ್ರದೇಶವು ಗೋದಾವರಿಯ ಪ್ರವಾಹದಿಂದಾಗಿ ಮುಳುಗಡೆಯಾಗಿದೆ. ಈ ಪ್ರದೇಶದ ಹಲವು ದೇವಾಲಯಗಳು ಮುಳುಗಿವೆ. ಕೊಂಕಣದಿಂದ ಗಡ್ಚಿರೋಲಿವರೆಗಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p>.<p>ಕೊಯ್ನಾ ನದಿಯ ಜಲಾನಯನ ಪ್ರದೇಶವಾದ ಸಾತಾರಾ ಜಿಲ್ಲೆಯಲ್ಲಿ ಹತ್ತು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಣೆಕಟ್ಟೆಯ ಏಳು ಗೇಟುಗಳನ್ನು ತೆರೆಯಲಾಗಿದ್ದು, ಕೆಳ ಭಾಗದ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ.</p>.<p>ಸಹ್ಯಾದ್ರಿ ತಪ್ಪಲಿನ ರಾಯಗಡ ಜಿಲ್ಲೆಯಲ್ಲಿನ ಮಳೆಯಿಂದಾಗಿ ಮಹಾಡ್, ನಾಗೊಠಾಣೆ ಮತ್ತು ರೋಹಾ ಪಟ್ಟಣಗಳಲ್ಲಿ ಪ್ರವಾಹ ಉಂಟಾಗಿದೆ. ಕಶೇಡಿ ಘಾಟ್ನಲ್ಲಿ ಭೂಕುಸಿತವಾಗಿದೆ.</p>.<p>ಕೊಲ್ಹಾಪುರದಲ್ಲಿರುವ ರಾಧಾನಗ್ರಿ ಅಣೆಕಟ್ಟೆಯ ಐದು ಗೇಟುಗಳನ್ನು ತೆರೆಯಲಾಗಿದೆ. ಇದು ಪಂಚಗಂಗಾ ನದಿಯಲ್ಲಿ ಪ್ರವಾಹಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಬರಪೀಡಿತ ಮರಾಠವಾಡ ಮತ್ತು ವಿದರ್ಭ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಜನರು ಹರ್ಷಗೊಂಡಿದ್ದಾರೆ. ಈ ಪ್ರದೇಶಗಳ ಹಲವು ನದಿಗಳು ತುಂಬಿ ಹರಿಯುತ್ತಿವೆ.</p>.<p>ಕರಾವಳಿಯ ಕೊಂಕಣ ಪ್ರದೇಶ, ಪಶ್ಚಿಮ ಮಹಾರಾಷ್ಟ್ರ ಮತ್ತು ಉತ್ತರ ಮಹಾರಾಷ್ಟ್ರಗಳಲ್ಲಿಯೂ ಶುಕ್ರವಾರ ಮತ್ತು ಶನಿವಾರ ಉತ್ತಮ ಮಳೆಯಾಗಿದೆ. ಗೋದಾವರಿ, ಕೃಷ್ಣಾ, ಕೊಯ್ನಾ, ಪಂಚಗಂಗಾ ಮತ್ತು ಇಂದ್ರಾವತಿಯಂತಹ ದೊಡ್ಡ ನದಿಗಳು ಉಕ್ಕಿ ಹರಿಯುತ್ತಿವೆ. ನಾಗಪುರ ನಗರದಲ್ಲಿಯೂ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.</p>.<p>ಮಹಾರಾಷ್ಟ್ರ ಮತ್ತು ಮುಂಬೈಯಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಉಪ ಮಹಾನಿರ್ದೇಶಕ ಕೆ.ಎಸ್. ಹೊಸಳಿಕರ್ ಹೇಳಿದ್ದಾರೆ.</p>.<p>ನಾಸಿಕ್ನ ಪವಿತ್ರ ರಾಮಕುಂಡ ಪ್ರದೇಶವು ಗೋದಾವರಿಯ ಪ್ರವಾಹದಿಂದಾಗಿ ಮುಳುಗಡೆಯಾಗಿದೆ. ಈ ಪ್ರದೇಶದ ಹಲವು ದೇವಾಲಯಗಳು ಮುಳುಗಿವೆ. ಕೊಂಕಣದಿಂದ ಗಡ್ಚಿರೋಲಿವರೆಗಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p>.<p>ಕೊಯ್ನಾ ನದಿಯ ಜಲಾನಯನ ಪ್ರದೇಶವಾದ ಸಾತಾರಾ ಜಿಲ್ಲೆಯಲ್ಲಿ ಹತ್ತು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಣೆಕಟ್ಟೆಯ ಏಳು ಗೇಟುಗಳನ್ನು ತೆರೆಯಲಾಗಿದ್ದು, ಕೆಳ ಭಾಗದ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ.</p>.<p>ಸಹ್ಯಾದ್ರಿ ತಪ್ಪಲಿನ ರಾಯಗಡ ಜಿಲ್ಲೆಯಲ್ಲಿನ ಮಳೆಯಿಂದಾಗಿ ಮಹಾಡ್, ನಾಗೊಠಾಣೆ ಮತ್ತು ರೋಹಾ ಪಟ್ಟಣಗಳಲ್ಲಿ ಪ್ರವಾಹ ಉಂಟಾಗಿದೆ. ಕಶೇಡಿ ಘಾಟ್ನಲ್ಲಿ ಭೂಕುಸಿತವಾಗಿದೆ.</p>.<p>ಕೊಲ್ಹಾಪುರದಲ್ಲಿರುವ ರಾಧಾನಗ್ರಿ ಅಣೆಕಟ್ಟೆಯ ಐದು ಗೇಟುಗಳನ್ನು ತೆರೆಯಲಾಗಿದೆ. ಇದು ಪಂಚಗಂಗಾ ನದಿಯಲ್ಲಿ ಪ್ರವಾಹಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>