<p><strong>ನಾಂದೇಡ್:</strong> ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಇಬ್ಬರು ಸಾಧುಗಳನ್ನು ಹೊಡೆದು ಕೊಂದ ಘಟನೆ ಹಸಿರಾಗಿರುವಾಗಲೇ ನಾಂದೇಡ್ ಜಿಲ್ಲೆಯ ಆಶ್ರಮವೊಂದರಲ್ಲಿ ಸಾಧುವೊಬ್ಬರನ್ನು ಕೊಲೆ ಮಾಡಲಾಗಿದೆ.</p>.<p>‘ನಾಂದೇಡ್ ಜಿಲ್ಲೆಯ ಉಮ್ರಿಯಲ್ಲಿರುವ ಆಶ್ರಮದಲ್ಲಿ ಸಾಧುವಿನ ದೇಹ ಶನಿವಾರ ರಾತ್ರಿ ಪತ್ತೆಯಾಗಿದೆ,’ ಎಂದು ನಾಂದೇಡ್ನ ಎಸ್ಪಿ ವಿಜಯಕುಮಾರ್ ಮಾಗರ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/2-sadhus-among-3-killed-by-mob-in-palghar-maharashtra-721199.html"><strong>ಮಹಾರಾಷ್ಟ್ರದಲ್ಲಿ ಪೊಲೀಸರೆದುರೇ ಸಾಧುಗಳನ್ನು ಹೊಡೆದು ಹತ್ಯೆ, 101 ಬಂಧನ</strong></a></p>.<p>ಕರ್ನಾಟಕ ಮೂಲದ ಶಿವಾಚಾರ್ಯ ನಿರ್ವಾಣರುದ್ರ ಪುಷ್ಪಪತಿನಾಥ ಮಹಾರಾಜ್ ಕೊಲೆಯಾದವರು. ಇವರು ಕರ್ನಾಟಕ ಮೂಲದವರು ಎಂದು ಹೇಳಲಾಗಿದೆ. ಸಾಧು ಕೊಲೆ ನಡೆದ ಆಶ್ರಮದ ಶೌಚಾಲಯದಲ್ಲಿ ಮತ್ತೊಬ್ಬ ವ್ಯಕ್ತಿಯೂ ಹತ್ಯೆಗೀಡಾಗಿದ್ದಾನೆ.</p>.<p>‘ಕೊಲೆಯಾದ ಸಾಧು ಮತ್ತು ಆರೋಪಿಗಳಿಬ್ಬರೂ ಒಂದೇ ಸಮುದಾಯದವರು. ಪ್ರಕರಣಕ್ಕೆ ಧರ್ಮದ ಹಿನ್ನೆಲೆ ಇಲ್ಲ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ,’ ಎಂದು ಎಸ್ಪಿ ವಿಜಯ್ ಕುಮಾರ್ ಮಾಗರ್ ತಿಳಿಸಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>‘ಯುವಕನೊಬ್ಬ ಆಶ್ರಮದಲ್ಲಿ ಲೂಟಿ ಮಾಡುವ ವೇಳೆ ಎರಡೂ ಹತ್ಯೆಗಳನ್ನು ನಡೆಸಿದ್ದಾನೆ,’ ಎಂದು ಮಹಾರಾಷ್ಟ್ರದ ಸುದ್ದಿ ವಾಹಿನಿಗಳು ವರದಿ ಮಾಡಿವೆ.</p>.<p>ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಏ.19ರ ರಾತ್ರಿ ಇಬ್ಬರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಭಾವಿಸಿ ಸ್ಥಳೀಯರೇ ಹೊಡೆದುಕೊಂದಿದ್ದರು. ಪೊಲೀಸರ ಕಣ್ಣೆದುರೇ ನಡೆದಿದ್ದ ಈ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಘಟನೆ ರಾಜಕೀಯದ ಆಯಾಮ ಪಡೆದುಕೊಂಡಿತ್ತು. ಕೊಲೆಗೆ ಸಂಬಂಧಿಸಿದಂತೆ 101ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿತ್ತು. ಕೆಲ ದಿನಗಳ ಹಿಂದಷ್ಟೇ ಮತ್ತೂ ಐವರನ್ನು ಬಂಧಿಸಲಾಗಿತ್ತು. ಹೀಗಿರುವಾಗಲೇ ಮತ್ತೊಬ್ಬ ಸಾಧುವಿನ ಹತ್ಯೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಂದೇಡ್:</strong> ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಇಬ್ಬರು ಸಾಧುಗಳನ್ನು ಹೊಡೆದು ಕೊಂದ ಘಟನೆ ಹಸಿರಾಗಿರುವಾಗಲೇ ನಾಂದೇಡ್ ಜಿಲ್ಲೆಯ ಆಶ್ರಮವೊಂದರಲ್ಲಿ ಸಾಧುವೊಬ್ಬರನ್ನು ಕೊಲೆ ಮಾಡಲಾಗಿದೆ.</p>.<p>‘ನಾಂದೇಡ್ ಜಿಲ್ಲೆಯ ಉಮ್ರಿಯಲ್ಲಿರುವ ಆಶ್ರಮದಲ್ಲಿ ಸಾಧುವಿನ ದೇಹ ಶನಿವಾರ ರಾತ್ರಿ ಪತ್ತೆಯಾಗಿದೆ,’ ಎಂದು ನಾಂದೇಡ್ನ ಎಸ್ಪಿ ವಿಜಯಕುಮಾರ್ ಮಾಗರ್ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/2-sadhus-among-3-killed-by-mob-in-palghar-maharashtra-721199.html"><strong>ಮಹಾರಾಷ್ಟ್ರದಲ್ಲಿ ಪೊಲೀಸರೆದುರೇ ಸಾಧುಗಳನ್ನು ಹೊಡೆದು ಹತ್ಯೆ, 101 ಬಂಧನ</strong></a></p>.<p>ಕರ್ನಾಟಕ ಮೂಲದ ಶಿವಾಚಾರ್ಯ ನಿರ್ವಾಣರುದ್ರ ಪುಷ್ಪಪತಿನಾಥ ಮಹಾರಾಜ್ ಕೊಲೆಯಾದವರು. ಇವರು ಕರ್ನಾಟಕ ಮೂಲದವರು ಎಂದು ಹೇಳಲಾಗಿದೆ. ಸಾಧು ಕೊಲೆ ನಡೆದ ಆಶ್ರಮದ ಶೌಚಾಲಯದಲ್ಲಿ ಮತ್ತೊಬ್ಬ ವ್ಯಕ್ತಿಯೂ ಹತ್ಯೆಗೀಡಾಗಿದ್ದಾನೆ.</p>.<p>‘ಕೊಲೆಯಾದ ಸಾಧು ಮತ್ತು ಆರೋಪಿಗಳಿಬ್ಬರೂ ಒಂದೇ ಸಮುದಾಯದವರು. ಪ್ರಕರಣಕ್ಕೆ ಧರ್ಮದ ಹಿನ್ನೆಲೆ ಇಲ್ಲ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಯ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ,’ ಎಂದು ಎಸ್ಪಿ ವಿಜಯ್ ಕುಮಾರ್ ಮಾಗರ್ ತಿಳಿಸಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>‘ಯುವಕನೊಬ್ಬ ಆಶ್ರಮದಲ್ಲಿ ಲೂಟಿ ಮಾಡುವ ವೇಳೆ ಎರಡೂ ಹತ್ಯೆಗಳನ್ನು ನಡೆಸಿದ್ದಾನೆ,’ ಎಂದು ಮಹಾರಾಷ್ಟ್ರದ ಸುದ್ದಿ ವಾಹಿನಿಗಳು ವರದಿ ಮಾಡಿವೆ.</p>.<p>ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಏ.19ರ ರಾತ್ರಿ ಇಬ್ಬರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಭಾವಿಸಿ ಸ್ಥಳೀಯರೇ ಹೊಡೆದುಕೊಂದಿದ್ದರು. ಪೊಲೀಸರ ಕಣ್ಣೆದುರೇ ನಡೆದಿದ್ದ ಈ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಘಟನೆ ರಾಜಕೀಯದ ಆಯಾಮ ಪಡೆದುಕೊಂಡಿತ್ತು. ಕೊಲೆಗೆ ಸಂಬಂಧಿಸಿದಂತೆ 101ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿತ್ತು. ಕೆಲ ದಿನಗಳ ಹಿಂದಷ್ಟೇ ಮತ್ತೂ ಐವರನ್ನು ಬಂಧಿಸಲಾಗಿತ್ತು. ಹೀಗಿರುವಾಗಲೇ ಮತ್ತೊಬ್ಬ ಸಾಧುವಿನ ಹತ್ಯೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>