ರಾಜ್ಯಪಾಲ ಬಿ.ಎಸ್. ಕೋಶ್ಯಾರಿ ಅವರು ನೇರ ನಡೆ ನುಡಿಯ ವ್ಯಕ್ತಿತ್ವ ಹೊಂದಿದ್ದು, ಅವರೊಬ್ಬ ‘ಸಂತ–ಮಹಾತ್ಮ’ ಎಂದು ಬಣ್ಣಿಸಲಾಗಿದೆ. ಆರ್ಎಸ್ಎಸ್ ಸಿದ್ಧಾಂತವನ್ನು ಜೀವನದುದ್ದಕ್ಕೂ ಅನುಸರಿಸಿಕೊಂಡು ಬಂದಿದ್ದಾರೆ. ಯಾವುದೇ ಸಂತ–ಮಹಾತ್ಮ ರಾಜಕೀಯ ಸಂಚು ರೂಪಿಸುವಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನುವ ನಂಬಿಕೆ ಇದೆ. ಹೀಗಾಗಿ, ರಾಜ್ಯಪಾಲರು ತಮ್ಮ ಅಧಿಕಾರ ಚಲಾಯಿಸಿ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿರುವವರನ್ನು ಕರೆಯಿಸಿಕೊಂಡು ಬುದ್ಧಿ ಹೇಳಬೇಕು ಎಂದು ಆಗ್ರಹಿಸಲಾಗಿದೆ.