<p><strong>ಸೊಲ್ಲಾಪುರ</strong>: ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜೈಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಸಲ್ಲಿಸಿದ್ದ ಜಾತಿ ಪ್ರಮಾಣಪತ್ರವನ್ನು ಸೋಮವಾರ ಜಿಲ್ಲಾ ಜಾತಿ ಮಾನ್ಯತಾ ಸಮಿತಿ ಅಸಿಂಧುಗೊಳಿಸಿದ್ದು, ಸಂಸದರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದೆ.</p>.<p>ಸೊಲ್ಲಾಪುರ ಕ್ಷೇತ್ರವು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿದೆ.</p>.<p>‘ಸಮಿತಿಗೆ ದೂರು ನೀಡಿದ್ದ ವಕೀಲರೊಬ್ಬರು, ಸ್ವಾಮೀಜಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ’ ಎಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಸುಶೀಲ್ಕುಮಾರ್ ಶಿಂಧೆ ಅವರನ್ನು ಸ್ವಾಮೀಜಿ 1.5 ಲಕ್ಷ ಮತಗಳಿಂದ ಸೋಲಿಸಿದ್ದರು.</p>.<p>ಪರಿಶಿಷ್ಟ ಜಾತಿಗೆ ಸೇರುವ ‘ಬೇಡ ಜಂಗಮ’ ಸಮುದಾಯದವರೆಂದು ಸ್ವಾಮೀಜಿ ಚುನಾವಣಾ ಅಫಿಡವಿಟ್<br />ನಲ್ಲಿ ನಮೂದಿಸಿದ್ದಾರೆ. ಆದರೆ, ಸ್ವಾಮೀಜಿ ‘ಹಿಂದೂ ಲಿಂಗಾಯತ’ ಸಮುದಾಯಕ್ಕೆ ಸೇರಿದವರೆಂದು ಪ್ರಮೋದ್ ಗಾಯಕ್ ವಾಡ್ ದೂರಿದ್ದು, ತನಿಖೆ ನಡೆಸಲು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊಲ್ಲಾಪುರ</strong>: ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜೈಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಸಲ್ಲಿಸಿದ್ದ ಜಾತಿ ಪ್ರಮಾಣಪತ್ರವನ್ನು ಸೋಮವಾರ ಜಿಲ್ಲಾ ಜಾತಿ ಮಾನ್ಯತಾ ಸಮಿತಿ ಅಸಿಂಧುಗೊಳಿಸಿದ್ದು, ಸಂಸದರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದೆ.</p>.<p>ಸೊಲ್ಲಾಪುರ ಕ್ಷೇತ್ರವು ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾಗಿದೆ.</p>.<p>‘ಸಮಿತಿಗೆ ದೂರು ನೀಡಿದ್ದ ವಕೀಲರೊಬ್ಬರು, ಸ್ವಾಮೀಜಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ’ ಎಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಸುಶೀಲ್ಕುಮಾರ್ ಶಿಂಧೆ ಅವರನ್ನು ಸ್ವಾಮೀಜಿ 1.5 ಲಕ್ಷ ಮತಗಳಿಂದ ಸೋಲಿಸಿದ್ದರು.</p>.<p>ಪರಿಶಿಷ್ಟ ಜಾತಿಗೆ ಸೇರುವ ‘ಬೇಡ ಜಂಗಮ’ ಸಮುದಾಯದವರೆಂದು ಸ್ವಾಮೀಜಿ ಚುನಾವಣಾ ಅಫಿಡವಿಟ್<br />ನಲ್ಲಿ ನಮೂದಿಸಿದ್ದಾರೆ. ಆದರೆ, ಸ್ವಾಮೀಜಿ ‘ಹಿಂದೂ ಲಿಂಗಾಯತ’ ಸಮುದಾಯಕ್ಕೆ ಸೇರಿದವರೆಂದು ಪ್ರಮೋದ್ ಗಾಯಕ್ ವಾಡ್ ದೂರಿದ್ದು, ತನಿಖೆ ನಡೆಸಲು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>