ಈ ಯೋಜನೆಯಡಿ ಆರೋಗ್ಯ ರಕ್ಷಣೆಗಾಗಿ ಮಹಾತ್ಮ ಗಾಂಧಿ ಅವರು ಪಾಲಿಸುತ್ತಿದ್ದ ಶಿಸ್ತು, ಅವರ ಚಿಂತನೆಗಳು ಮತ್ತು ಒಳ್ಳೆಯ ಗುಣಗಳ ಬಗ್ಗೆ ಮಕ್ಕಳಿಗೆ ತಿಳಿವಳಿಕೆ ನೀಡಲಾಗುವುದು. ಒಂದರ್ಥದಲ್ಲಿ ಗಾಂಧೀಜಿಯನ್ನು ಉತ್ತಮ ಆರೋಗ್ಯದ ‘ಪ್ರಚಾರ ರಾಯಭಾರಿ’ಯ ರೀತಿಯಲ್ಲಿ ಬಳಸಿಕೊಂಡು ಮಕ್ಕಳಿಗೆ ತಿಳಿವಳಿಕೆ ನೀಡಲಾಗುವುದು. ಗಾಂಧೀಜಿಯ 150ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಈ ಯೋಜನೆ ರೂಪಿಸಲಾಗಿದೆ.