<p><strong>ಸಿಲಿಗುರಿ:</strong> ಪಶ್ಚಿಮ ಬಂಗಾಳದಲ್ಲಿನ ಅಭಿವೃದ್ಧಿಗೆ ಇಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆಯೊಡ್ಡುತ್ತಿದ್ದಾರೆ.<strong>ಅವರು ಸ್ಪೀಡ್ ಬ್ರೇಕರ್ ದೀದಿ.</strong>ಈ ರೀತಿ ಅಭಿವೃದ್ಧಿಗೆ ಅಡಚಣೆಯನ್ನುಂಟು ಮಾಡುವ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ.</p>.<p>ಬುಧವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇನ್ನಿತರ ರಾಜ್ಯಗಳಲ್ಲಿ ನಾನು ಅಭಿವೃದ್ಧಿ ಕಾರ್ಯ ಮಾಡಿದಂತೆ ಪಶ್ಚಿಮ ಬಂಗಾಳದಲ್ಲಿಯೂ ನಾನು ಅಭಿವೃದ್ದಿ ಕಾರ್ಯಗಳನ್ನು ಮಾಡಬಲ್ಲೆ.ಆದರೆ ಇಲ್ಲಿ ಸ್ಪೀಡ್ ಬ್ರೇಕರ್ ಇದೆ, ಅವರೇ ದೀದಿ ಎಂದಿದ್ದಾರೆ.</p>.<p>2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದಾಗ್ಯೂ 2019ರ ಈ ಲೋಕಸಭಾ ಚುನಾವಣೆಯು ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರವನ್ನು ಕೊನೆಗೊಳಿಸಲಿರುವ ಆರಂಭಿಕ ಕ್ರಿಯೆ ಆಗಲಿದೆ.</p>.<p>ದೀದಿ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಬಡತನ ನಿರ್ಮೂಲನೆ ಆದರೆ ಆಕೆಯ ರಾಜಕೀಯ ನಿಂತು ಹೋಗುತ್ತದೆ.ಇದೇ ಸ್ಥಿತಿ ಸಿಪಿಐ(ಎಂ)ನದ್ದು. ತೃಣಮೂಲ ಕಾಂಗ್ರೆಸ್ ನಾಯಕರು ಪೋಂಜಿ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಯೋಜನೆಗಳಿಗಾಗಿ ಹೂಡಿದ್ದ ಹಣವನ್ನು ಕದ್ದು ಈ ನಾಯಕರು ಪರಾರಿಯಾಗಿದ್ದರು. ಟಿಎಂಸಿಯಿಂದ ಸಂಬಳ ಪಡೆದು ಭಯೋತ್ಪಾದನೆ ಸೃಷ್ಟಿಸುವವರಿದ್ದಾರೆ. ಶೀಘ್ರವೇಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲಿಗುರಿ:</strong> ಪಶ್ಚಿಮ ಬಂಗಾಳದಲ್ಲಿನ ಅಭಿವೃದ್ಧಿಗೆ ಇಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆಯೊಡ್ಡುತ್ತಿದ್ದಾರೆ.<strong>ಅವರು ಸ್ಪೀಡ್ ಬ್ರೇಕರ್ ದೀದಿ.</strong>ಈ ರೀತಿ ಅಭಿವೃದ್ಧಿಗೆ ಅಡಚಣೆಯನ್ನುಂಟು ಮಾಡುವ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ.</p>.<p>ಬುಧವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇನ್ನಿತರ ರಾಜ್ಯಗಳಲ್ಲಿ ನಾನು ಅಭಿವೃದ್ಧಿ ಕಾರ್ಯ ಮಾಡಿದಂತೆ ಪಶ್ಚಿಮ ಬಂಗಾಳದಲ್ಲಿಯೂ ನಾನು ಅಭಿವೃದ್ದಿ ಕಾರ್ಯಗಳನ್ನು ಮಾಡಬಲ್ಲೆ.ಆದರೆ ಇಲ್ಲಿ ಸ್ಪೀಡ್ ಬ್ರೇಕರ್ ಇದೆ, ಅವರೇ ದೀದಿ ಎಂದಿದ್ದಾರೆ.</p>.<p>2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದಾಗ್ಯೂ 2019ರ ಈ ಲೋಕಸಭಾ ಚುನಾವಣೆಯು ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರವನ್ನು ಕೊನೆಗೊಳಿಸಲಿರುವ ಆರಂಭಿಕ ಕ್ರಿಯೆ ಆಗಲಿದೆ.</p>.<p>ದೀದಿ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಬಡತನ ನಿರ್ಮೂಲನೆ ಆದರೆ ಆಕೆಯ ರಾಜಕೀಯ ನಿಂತು ಹೋಗುತ್ತದೆ.ಇದೇ ಸ್ಥಿತಿ ಸಿಪಿಐ(ಎಂ)ನದ್ದು. ತೃಣಮೂಲ ಕಾಂಗ್ರೆಸ್ ನಾಯಕರು ಪೋಂಜಿ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಯೋಜನೆಗಳಿಗಾಗಿ ಹೂಡಿದ್ದ ಹಣವನ್ನು ಕದ್ದು ಈ ನಾಯಕರು ಪರಾರಿಯಾಗಿದ್ದರು. ಟಿಎಂಸಿಯಿಂದ ಸಂಬಳ ಪಡೆದು ಭಯೋತ್ಪಾದನೆ ಸೃಷ್ಟಿಸುವವರಿದ್ದಾರೆ. ಶೀಘ್ರವೇಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>