ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ದೀದಿ ದೆಹಲಿ ಮೇಲೆ ಕಣ್ಣಿಟ್ಟಿದ್ದು, ಬಂಗಾಳವನ್ನು ದಲ್ಲಾಳಿಗಳಿಗೆ ನೀಡಿದ್ದಾರೆ'

Last Updated 8 ಫೆಬ್ರುವರಿ 2019, 14:06 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ನಾಯಕತ್ವ ಮುನ್ನಡೆಸಲು ಕಣ್ಣಿಟ್ಟಿದ್ದುಪಶ್ಚಿಮ ಬಂಗಾಳವನ್ನು ದಲ್ಲಾಳಿಗಳಿಗೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಬಂಗಾಳದ ಜಲ್‌ಪೈಗುರಿ ಎಂಬಲ್ಲಿ ಶುಕ್ರವಾರ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಬಂಗಾಳದಲ್ಲಿ ಟಿಎಂಸಿ ಸರ್ಕಾರವಿದ್ದರೂ ದಲ್ಲಾಳಿಗಳು ಸರ್ಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿಗೆ ಬರುವುದರ ಬಗ್ಗೆಯೇ ದೀದಿ ಚಿಂತೆ ಮಾಡುತ್ತಿದ್ದಾರೆ. ಹಾಗಾಗಿ ಆಕೆ ಪಶ್ಚಿಮ ಬಂಗಾಳವನ್ನು ಬಿಟ್ಟು ಬಿಟ್ಟಿದ್ದಾರೆ.ಅಲ್ಲಿರುವ ಬಡವರು, ಮಧ್ಯಮ ವರ್ಗದವರನ್ನು ಮಧ್ಯವರ್ತಿಗಳ ಮತ್ತು ಅಧಿಕಾರಯುಕ್ತರ ಗುಂಪು ಲೂಟಿ ಮಾಡುತ್ತಿದೆ.

ಪಶ್ಚಿಮ ಬಂಗಾಳದಲ್ಲಿನ ಈಗಿನ ಪರಿಸ್ಥಿತಿ ಹೇಗಿದೆ ಅಂದರೆ ದೀದಿ ಅಲ್ಲಿನ ಮುಖ್ಯಮಂತ್ರಿ ಆಗಿದ್ದರೂ ಇನ್ನು ಯಾರೋ ಒಬ್ಬರು ದಾದಾಗಿರಿ ಮಾಡುತ್ತಿದ್ದಾರೆ.ಟಿಎಂಸಿ ಅಧಿಕಾರದಲ್ಲಿದ್ದರೂ ದಲ್ಲಾಳಿಗಳು ಆಡಳಿತನಡೆಸುತ್ತಿದ್ದಾರೆ ಎಂದಿದ್ದಾರೆ ಮೋದಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT