ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಮತಾ ರ್‍ಯಾಲಿ

Last Updated 16 ಡಿಸೆಂಬರ್ 2019, 6:21 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಹೊತ್ತಿಕೊಂಡಿರುವ ಕಿಚ್ಚು ಇನ್ನೂ ಆರಿಲ್ಲ. ಈ ನಡುವೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಯ್ದೆ ವಿರೋಧಿಸಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.

‘ಕೇಂದ್ರ ಸರ್ಕಾರದ ಅಸಾಂವಿಧಾನಿಕ ಕಾಯ್ದೆಗಳ ವಿರುದ್ಧ ಕೊಲ್ಕತ್ತಾದಲ್ಲಿ ಬೃಹತ್‌ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 1 ಗಂಟೆಗೆ ಕೆಂಪು ರಸ್ತೆಯಲ್ಲಿನ ಬಾಬಾಸಾಹೇಬ್‌ ಅಂಬೇಡ್ಕರ್‌ ಪ್ರತಿಮೆಯಿಂದ ರ್‍ಯಾಲಿ ಶುರುವಾಗಲಿದೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

ಕೊಲ್ಕತ್ತಾದ ಜನರು ರ್‍ಯಾಲಿಯಲ್ಲಿ ಪಾಲ್ಗೊಳ್ಳಬೇಕಾಗಿಯೂ ಮಮತಾ ಕೋರಿದ್ದು, ‘ಪ್ರತಿಭಟನೆ ಶಾಂತಿಯುತವಾಗಿರಬೇಕು’ ಎಂದು ಮನವಿ ಮಾಡಿದ್ದಾರೆ.

ಪೌರತ್ಮ ತಿದ್ದುಪಡಿಕಾಯ್ದೆಯನ್ನು ವಿರೋಧಿಸಿ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ.ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಜನರು ಶಾಂತಿಯುತ ಪ್ರತಿಭಟನೆ ನಡೆಸಬೇಕು’ ಎಂದು ಕರೆಕೊಟ್ಟರು.

ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಷೆಲ್‌ ಸಿಡಿಸಿದ್ದರಿಂದರೊಚ್ಚಿಗೆದ್ದ ಪ್ರತಿಭಟನಕಾರರು ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗಳಿಗೆ ಬೆಂಕಿ ಹಚ್ಚಿದ್ದರು. 15ಕ್ಕೂ ಹೆಚ್ಚು ಬಸ್‌ಗಳು ಸುಟ್ಟುಕರಕಲಾಗಿವೆ.22ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಹಿಂಸಾಚಾರದ ಕಾರಣ20 ರೈಲುಗಳ ಸಂಚಾರವನ್ನು ಶನಿವಾರ ರದ್ದು ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT