ಆರ್ಥಿಕತೆ ಕುರಿತಾಗಿ ಆರ್ಬಿಐ ನೀಡಿರುವ ಇತ್ತೀಚಿನ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು,ಆರ್ಬಿಐ ಏನನ್ನೇ ಹೇಳಿದ್ದರೂ ಕೂಡ ಅದು ಸೂಕ್ಷ್ಮ ವಿಚಾರ. ಆದರೆ ಕೇಂದ್ರ ಸರ್ಕಾರವು ದ್ವೇಷದ ರಾಜಕೀಯ ಮಾಡುವ ಬದಲು ಆರ್ಥಿಕತೆಯತ್ತ ಗಮನಹರಿಸಬೇಕು. ಪ್ರಧಾನಮಂತ್ರಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅಗತ್ಯಬಿದ್ದರೆ ವಿರೋಧ ಪಕ್ಷಗಳೊಂದಿಗೂ ಚರ್ಚೆ ನಡೆಸಬೇಕು ಎಂದು ತಿಳಿಸಿದ್ದಾರೆ.