ಕೋಲ್ಕತ್ತದಲ್ಲಿ ಮಾತನಾಡಿರುವ ಅವರು, ‘ಇಂದು ಜಗತ್ತು ಒಂದು ಕುಟುಂಬ ಎಂಬಂತಾಗಿದೆ. ಇಲ್ಲಿ ಎಲ್ಲರೂ ಎಲ್ಲರನ್ನೂ ಪ್ರೀತಿಸಬೇಕು ಎಂಬುದು ನಮ್ಮ ಕಲ್ಪನೆ. ಈ ಕಲ್ಪನೆ ಅಳಿದರೆ ಎಲ್ಲವೂ ಅಳಿದಂತೆ. ಆದರೆ, ಇಂದು ಪ್ರಜಾಪ್ರಭುತ್ವ, ಮೂಲಭೂತ ಹಕ್ಕುಗಳು, ಸಾಂವಿಧಾನಿಕ ಹಕ್ಕುಗಳು ಉಳಿಯುತ್ತವೆಯೇ ಎಂಬುದರ ಬಗ್ಗೆ ಹಲವರು ಆತಂಕಗೊಂಡಿದ್ದಾರೆ. ನಮ್ಮ ಹಕ್ಕುಗಳು ಉಳಿಯುತ್ತವೆ ಎಂದು ನಾನು ಭಾವಿಸಿದ್ದೇನೆ,’ ಎಂದು ಅವರು ಹೇಳಿದ್ದಾರೆ.