ಅಗರ್ತಲ: ತ್ರಿಪುರ ಮುಖ್ಯಮಂತ್ರಿಬಿಪ್ಲಬ್ ಕುಮಾರ್ ದೇವ್ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಪ್ರಕಟಿಸಿದ ಆರೋಪಕ್ಕಾಗಿ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಅನುಪಮ್ ಪೌಲ್ ಬಂಧಿತ ಆರೋಪಿ. ಈತ ಏಪ್ರಿಲ್ 25ರಂದು ಮುಖ್ಯಮಂತ್ರಿ ಅವರನ್ನು ಟೀಕಿಸಿ ಬರೆದಿದ್ದ.
ಬಂಧನದ ಬಳಿಕ ತ್ರಿಪುರ ಪೊಲೀಸರು ದೆಹಲಿ ನ್ಯಾಯಾಲಯದಲ್ಲಿ ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿದರು.
ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ವಶಕ್ಕೊಪ್ಪಿಸಬೇಕೆಂದು ಪೊಲೀಸರು ಸಲ್ಲಿಸಿದ ಮನವಿಯನ್ನು ದೆಹಲಿ ನ್ಯಾಯಾಲಯ ಪುರಸ್ಕರಿಸಿದೆ.
‘ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ತ್ರಿಪುರಕ್ಕೆ ಕರೆದುಕೊಂಡು ಹೋಗಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಳು ಮಾಹಿತಿ, ಮೋಸ, ಪಿತೂರಿ ಆರೋಪದಡಿ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇದೇ ರೀತಿಯ ಸಂದೇಶವನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತ ಸೈಕತ್ ಪಲಪತ್ರ ಅವರನ್ನು ಈ ಮೊದಲು ಬಂಧಿಸಲಾಗಿತ್ತು. ಅವರಿಗೆ ಜಾಮೀನು ದೊರಕಿದೆ.