<p><strong>ಕೋಲ್ಕತ್ತ:</strong> ಕೋಲ್ಕತ್ತದಿಂದ ಮುಂಬೈಗೆ ಪ್ರಯಾಣ ಬೆಳೆಸಬೇಕಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಭಯೋತ್ಪಾದಕರಿದ್ದಾರೆ ಎಂದು ‘ಹಾಸ್ಯ’ ಮಾಡಿದಪ್ರಯಾಣಿಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>‘ವಿಮಾನವನ್ನು ಮತ್ತೊಮ್ಮೆ ಸಂಪೂರ್ಣ ತಪಾಸಣೆಗೆ ಒಳಪಡಿಸಿ, ಬಳಿಕ ಹಾರಾಟಕ್ಕೆ ಅನುಮತಿ ನೀಡಲಾಯಿತು. ವಿಮಾನ ಟೇಕ್ ಆಫ್ ಆಗಲು ಒಂದು ತಾಸು ವಿಳಂಬವಾಯಿತು’ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.</p>.<p>ಯೋಗವೇದಾಂತ್ ಪೊದ್ದಾರ್ (21) ತನ್ನ ಮುಖ ಮರೆಮಾಚಿಕೊಂಡು ‘ವಿಮಾನದಲ್ಲಿ ಭಯೋತ್ಪಾದಕರಿದ್ದಾರೆ. ನಾನು ಮಹಿಳೆಯರ ಮನಸ್ಸು ಹಾಳುಮಾಡುತ್ತೇನೆ’ ಎಂದು ಫೋನ್ನಲ್ಲಿ ಸಂದೇಶ ಟೈಪ್ ಮಾಡುತ್ತಿದ್ದ. ಪೊದ್ದಾರ್ ಸೀಟಿನ ಹಿಂಭಾಗದಲ್ಲಿದ್ದ ಸಹಪ್ರಯಾಣಿಕ ಬೆಂಜಮಿನ್ ಪ್ಲಾಕೆಟ್ ಇದನ್ನು ಗಮನಿಸಿ ವಿಮಾನದ ಕ್ಯಾಪ್ಟನ್ಗೆ ವಿಷಯ ತಿಳಿಸಿದ್ದಾರೆ.</p>.<p>ಕ್ಯಾಪ್ಟನ್ ಈ ವಿಷಯವನ್ನು ಜೆಟ್ ಏರ್ವೇಸ್ ನಿರ್ವಾಹಕರಿಗೆ ರವಾನಿಸಿದ ನಂತರ, ಭದ್ರತಾ ಪಡೆ ಅಧಿಕಾರಿಗಳು ಪೊದ್ದಾರ್ನನ್ನು ವಶಕ್ಕೆ ಪಡೆದು ಆತನ ಲಗೇಜ್ಗಳನ್ನು ಪರಿಶೀಲಿಸಿದ್ದಾರೆ.</p>.<p>‘ಯಾವುದೇ ಅನುಮಾನಾಸ್ಪದ ಅಥವಾ ಆಕ್ಷೇಪಾರ್ಹ ವಸ್ತುಗಳು ಆತನ ಬಳಿ ಪತ್ತೆಯಾಗಿಲ್ಲ. ಭಯೋತ್ಪಾದಕರ ಕುರಿತು ಸ್ನೇಹಿತರ ಬಳಿ ಹಾಸ್ಯ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಆತ ತಿಳಿಸಿದ್ದಾನೆ’ ಎಂದು ವಿಮಾನ ನಿಲ್ದಾಣಗಳಿಗೆ ಭದ್ರತೆ ಒದಗಿಸುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.</p>.<p>ಕೋಲ್ಕತ್ತದ ಬೇಲಘಾಟ್ ನಿವಾಸಿಯಾಗಿರುವ ಈತನನ್ನುಹೆಚ್ಚಿನ ವಿಚಾರಣೆಗಾಗಿ ನೇತಾಜಿ ಸುಭಾಷ್ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಸಿಐಎಸ್ಎಫ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕೋಲ್ಕತ್ತದಿಂದ ಮುಂಬೈಗೆ ಪ್ರಯಾಣ ಬೆಳೆಸಬೇಕಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಭಯೋತ್ಪಾದಕರಿದ್ದಾರೆ ಎಂದು ‘ಹಾಸ್ಯ’ ಮಾಡಿದಪ್ರಯಾಣಿಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>‘ವಿಮಾನವನ್ನು ಮತ್ತೊಮ್ಮೆ ಸಂಪೂರ್ಣ ತಪಾಸಣೆಗೆ ಒಳಪಡಿಸಿ, ಬಳಿಕ ಹಾರಾಟಕ್ಕೆ ಅನುಮತಿ ನೀಡಲಾಯಿತು. ವಿಮಾನ ಟೇಕ್ ಆಫ್ ಆಗಲು ಒಂದು ತಾಸು ವಿಳಂಬವಾಯಿತು’ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.</p>.<p>ಯೋಗವೇದಾಂತ್ ಪೊದ್ದಾರ್ (21) ತನ್ನ ಮುಖ ಮರೆಮಾಚಿಕೊಂಡು ‘ವಿಮಾನದಲ್ಲಿ ಭಯೋತ್ಪಾದಕರಿದ್ದಾರೆ. ನಾನು ಮಹಿಳೆಯರ ಮನಸ್ಸು ಹಾಳುಮಾಡುತ್ತೇನೆ’ ಎಂದು ಫೋನ್ನಲ್ಲಿ ಸಂದೇಶ ಟೈಪ್ ಮಾಡುತ್ತಿದ್ದ. ಪೊದ್ದಾರ್ ಸೀಟಿನ ಹಿಂಭಾಗದಲ್ಲಿದ್ದ ಸಹಪ್ರಯಾಣಿಕ ಬೆಂಜಮಿನ್ ಪ್ಲಾಕೆಟ್ ಇದನ್ನು ಗಮನಿಸಿ ವಿಮಾನದ ಕ್ಯಾಪ್ಟನ್ಗೆ ವಿಷಯ ತಿಳಿಸಿದ್ದಾರೆ.</p>.<p>ಕ್ಯಾಪ್ಟನ್ ಈ ವಿಷಯವನ್ನು ಜೆಟ್ ಏರ್ವೇಸ್ ನಿರ್ವಾಹಕರಿಗೆ ರವಾನಿಸಿದ ನಂತರ, ಭದ್ರತಾ ಪಡೆ ಅಧಿಕಾರಿಗಳು ಪೊದ್ದಾರ್ನನ್ನು ವಶಕ್ಕೆ ಪಡೆದು ಆತನ ಲಗೇಜ್ಗಳನ್ನು ಪರಿಶೀಲಿಸಿದ್ದಾರೆ.</p>.<p>‘ಯಾವುದೇ ಅನುಮಾನಾಸ್ಪದ ಅಥವಾ ಆಕ್ಷೇಪಾರ್ಹ ವಸ್ತುಗಳು ಆತನ ಬಳಿ ಪತ್ತೆಯಾಗಿಲ್ಲ. ಭಯೋತ್ಪಾದಕರ ಕುರಿತು ಸ್ನೇಹಿತರ ಬಳಿ ಹಾಸ್ಯ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಆತ ತಿಳಿಸಿದ್ದಾನೆ’ ಎಂದು ವಿಮಾನ ನಿಲ್ದಾಣಗಳಿಗೆ ಭದ್ರತೆ ಒದಗಿಸುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.</p>.<p>ಕೋಲ್ಕತ್ತದ ಬೇಲಘಾಟ್ ನಿವಾಸಿಯಾಗಿರುವ ಈತನನ್ನುಹೆಚ್ಚಿನ ವಿಚಾರಣೆಗಾಗಿ ನೇತಾಜಿ ಸುಭಾಷ್ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಸಿಐಎಸ್ಎಫ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>