ಅಸ್ತಾನಾ ವಿರುದ್ಧದ ತನಿಖೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಮನೀಶ್ ಕುಮಾರ್ ಸಿನ್ಹಾ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿದ್ದಾರೆ. ಸಿಬಿಐಯಲ್ಲಿನ ಕಚ್ಚಾಟ ತೀವ್ರಗೊಂಡಾಗ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅಸ್ತಾನಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಬಳಿಕ ಸಿನ್ಹಾ ಅವರನ್ನು ವರ್ಗಾಯಿಸಲಾಗಿತ್ತು.