ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತಾರಪುರಕ್ಕೆ ಮನಮೋಹನ್

Last Updated 3 ಅಕ್ಟೋಬರ್ 2019, 16:38 IST
ಅಕ್ಷರ ಗಾತ್ರ

ನವದೆಹಲಿ:ಪಾಕಿಸ್ತಾನದಲ್ಲಿರುವ ಕರ್ತಾರಪುರ ಸಾಹಿಬ್ ಗುರುದ್ವಾರಕ್ಕೆ ನೂತನ ಕಾರಿಡಾರ್‌ ಮೂಲಕ ಭೇಟಿ ನೀಡಲಿರುವ ಮೊದಲ ಬ್ಯಾಚ್‌ನ ಯಾತ್ರಾರ್ಥಿಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಹ ಇರಲಿದ್ದಾರೆ.

ಪಾಕಿಸ್ತಾನದ ಪಂಜಾಬ್‌ ಪ್ರಾಂತದಲ್ಲಿರುವ ಈ ಗುರುದ್ವಾರವು ಭಾರತದ ಗಡಿಯಿಂದ ಕೇವಲ 3 ಕಿ.ಮೀ. ದೂರದಲ್ಲಿದೆ. ಈವರೆಗೆ ಇಸ್ಲಮಾಬಾದ್‌ಗೆ ಹೋಗಿ, ಅಲ್ಲಿಂದ ಈ ಗುರುದ್ವಾರಕ್ಕೆ ಭೇಟಿ ನೀಡಬೇಕಿತ್ತು. ಇಲ್ಲವೇ ಗಡಿಯಲ್ಲಿ ನಿಂತು ದೂರದರ್ಶಕದ ಮೂಲಕ ಗುರುದ್ವಾರವನ್ನು ನೋಡಬೇಕಿತ್ತು. ಸಿಖ್ಖರ ಪವಿತ್ರ ಕ್ಷೇತ್ರವಾದ ಈ ಗುರುದ್ವಾರಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಪಾಕಿಸ್ತಾನವು ಗಡಿಯಿಂದ 3 ಕಿ.ಮೀ. ಉದ್ದದ ಕಾರಿಡಾರ್ ನಿರ್ಮಿಸಿದೆ. ಇದೇ 9ರಂದು ಮೊದಲ ತಂಡ ಭೇಟಿ ನೀಡಲಿದೆ. ಅದರಲ್ಲಿ ಮನಮೋಹನ್ ಸಿಂಗ್ ಸಹ ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT