ಪ್ರಸಕ್ತ ಆರ್ಥಿಕ ಹಿಂಜರಿತ ಮತ್ತು ಗ್ರಾಮೀಣ ಪ್ರದೇಶದ ಸಂಕಷ್ಟಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಹೊಣೆ ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ನ ಮೇಲೆ ದೋಷ ಹೊರಿಸುವುದರಿಂದ ಯಾವ ಪ್ರಯೋಜನವು ಆಗದು ಎಂದೂ ಅವರು ಹೇಳಿದ್ದಾರೆ. ‘ಸರ್ಕಾರವು ಸಾಕಷ್ಟು ವಿಚಾರಗಳ ಬಗ್ಗೆ ಮಾತನಾ ಡುತ್ತಿದೆ. ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎನ್ನುತ್ತಿದೆ. ಆದರೆ, ಅದಕ್ಕೆ ವ್ಯತಿರಿಕ್ತವಾದದ್ದು ನಡೆಯುತ್ತಿದೆ. ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಸುದ್ದಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಸರ್ಕಾರ ಭಾವಿಸಿದೆ. ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ’ ಎಂದರು.