ಪಣಜಿ:ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಸೋಮವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು.
ಅಂತಿಮಯಾತ್ರೆಯಲ್ಲಿ ಸಾವಿರಾರು ಅಭಿಮಾನಿಗಳು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರದ ಕೆಲವು ಸಚಿವರು ಹಾಗೂ ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.
ಪರ್ರೀಕರ್ ಅವರ ಹಿರಿಯ ಪುತ್ರ ಉತ್ಪಾಲ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಕಲಾ ಅಕಾಡೆಮಿಯಿಂದ ಪಣಜಿಯ ಮಿರಾಮರ್ ಬೀಚ್ವರೆಗೆ ಅಂತಿಮ ಯಾತ್ರೆ ನಡೆಯಿತು.