ಮನೋಜ್ ತಿವಾರಿ ಅವರು 2016ರಲ್ಲಿ ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲದ ಬಳಿಕ ತಿವಾರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಲು ಸೂಕ್ತ ಸಮಯ ಎಂದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗಿತ್ತು. ಕೆಲವು ಮೂಲಗಳ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ತಿವಾರಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಪಕ್ಷದ ಮುಂದೆ ಬೇರೆ ಆಯ್ಕೆಗಳಿಲ್ಲದಿರುವುದರಿಂದ ಅವರನ್ನು ಸ್ಥಾನದಲ್ಲಿ ಮುಂದುವರಿಸಲಾಗಿತ್ತು ಎನ್ನಲಾಗಿದೆ.