ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಪ್ರವೇಶ ಇನ್ನಷ್ಟು ವಿಳಂಬ

ವಾಡಿಕೆಯಂತೆ ಜೂ.1ಕ್ಕೆ ಪ್ರವೇಶವಾಗಬೇಕು
Last Updated 15 ಮೇ 2019, 18:59 IST
ಅಕ್ಷರ ಗಾತ್ರ

ನವದೆಹಲಿ:ಪ್ರಸಕ್ತ ವರ್ಷ ದಲ್ಲಿನೈರುತ್ಯ ಮುಂಗಾರು ಮಾರುತದ ಪ್ರವೇಶ ವಿಳಂಬವಾಗಲಿದ್ದು, ಕೇರಳಕ್ಕೆ ಜೂನ್ 6 ರಂದು ಮುಂಗಾರು ಪ್ರವೇಶಿಸಲಿದೆ ಎಂದುಭಾರತೀಯ ಹವಾಮಾನ ಇಲಾಖೆ(ಐಎಂಡಿ)ಮುನ್ಸೂಚನೆ ನೀಡಿದೆ.

ವಾಡಿಕೆಯಂತೆ ಜೂನ್ 1ಕ್ಕೆ ಮುಂಗಾರು ಕೇರಳ ಪ್ರವೇಶಿಸಿ ಮುಂದುವರಿಯಬೇಕು. ಈ ವರ್ಷ ಜೂನ್ 6ಕ್ಕೆ ಮುಂಗಾರು ಪ್ರವೇಶಿಸುವ ಮುನ್ಸೂಚನೆಯನ್ನು ಐಎಂಡಿ ನೀಡಿದ್ದು, ಈ ದಿನಕ್ಕಿಂತನಾಲ್ಕು ದಿನ ಮುಂಚಿತವಾಗಿ ಅಥವಾ ತಡವಾಗಿ ಮಾರುತಗಳ ಪ್ರವೇಶವಾಗಬಹುದುಎಂದು ಇಲಾಖೆ ತಿಳಿಸಿದೆ. ನೈರುತ್ಯ ಮುಂಗಾರು ಮಾರುತವು ಮೇ 18–19ರಂದು ಅಂಡಮಾನ್‌ ಸಮುದ್ರ ಮತ್ತು ನಿಕೋಬಾರ್ ದ್ವೀಪಗಳನ್ನು ದಾಟಿ ಮುಂದುವರಿಯಲು ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದು ಐಎಂಡಿ ತಿಳಿಸಿದೆ.

ಮಂಗಳವಾರ ಹವಾಮಾನ ವಿಶ್ಲೇಷಣಾ ಖಾಸಗಿ ಸಂಸ್ಥೆ ಸ್ಕೈಮೆಟ್ ಜೂನ್ 4ರಂದು ಮುಂಗಾರು ಮಾರುತ ಕೇರಳ ಕರಾವಳಿ ಪ್ರವೇಶಿಸಲಿವೆ ಎಂದು ಮುನ್ಸೂಚನೆ ನೀಡಿತ್ತು.

ಮಳೆ ಮಾಹಿತಿ...

2014ರಿಂದ ಸತತ 3 ವರ್ಷ ಮುಂಗಾರು ಪ್ರವೇಶ ವಿಳಂಬವಾಗಿತ್ತು. 2014ರಲ್ಲಿ ಜೂನ್ 5ಕ್ಕೆ, 2015ರಲ್ಲಿ ಜೂನ್ 6ಕ್ಕೆ ಹಾಗೂ 2016ರಲ್ಲಿ ಜೂನ್ 8ಕ್ಕೆ ಮುಂಗಾರು ಮಾರುತವು ಕೇರಳ ಪ್ರವೇಶಿಸಿತ್ತು. ಮುಂಗಾರು ಪ್ರವೇಶ ವಿಳಂಬದಿಂದ ಮಳೆ ಕೊರತೆ ಆಗಲಿದೆ ಎನ್ನುವುದನ್ನು ಹೇಳಲು ಸಾಧ್ಯವಿಲ್ಲ. 2017ರಲ್ಲಿ ಮೇ 30ರಂದು ಹಾಗೂ 2018ರಲ್ಲಿ ಮೇ 29ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಿತ್ತು. ಹೀಗಿದ್ದರೂ, ಆ ಎರಡು ವರ್ಷವೂ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT