ಬೆಳ್ಳಂದೂರು ಮತ್ತು ಅಗರ ಕೆರೆಗಳ ಸಂರಕ್ಷಿತ ವಲಯದಲ್ಲಿ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್, ಹೋಟೆಲ್, ಬಹುಮಹಡಿ ಕಾರು ನಿಲುಗಡೆ ಸಂಕೀರ್ಣ, ವಾಣಿಜ್ಯ ಮತ್ತು ವಸತಿ ಸಮುಚ್ಛಯ ನಿರ್ಮಿಸಿದಲ್ಲಿ ಪರಿಸರದ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ ಎಂಬ ಎನ್ಜಿಟಿಯ ಅಭಿಪ್ರಾಯಕ್ಕೆ ನ್ಯಾಯಪೀಠ
ಸಮ್ಮತಿ ಸೂಚಿಸಿತ್ತು. ಜೊತೆಗೆ ಕೆರೆ ಒತ್ತುವರಿ ಮಾಡಿದ್ದಕ್ಕೆ ಮಂತ್ರಿ ಟೆಕ್ಜೋನ್ಗೆ ವಿಧಿಸಿದ್ದ ₹117 ಕೋಟಿ ದಂಡ, ಕೋರ್ ಮೈಂಡ್ ಸಾಫ್ಟ್ವೇರ್ ಮತ್ತು ಸರ್ವೀಸಸ್ ಪ್ರೈ.ಲಿ.ಗೆ ವಿಧಿಸಿದ್ದ ₹13.5 ಕೋಟಿ ದಂಡವನ್ನು ಸಡಿಲಗೊಳಿಸುವ ಮನವಿಯನ್ನು ಪೀಠ ತಿರಸ್ಕರಿಸಿತ್ತು.